ಆ್ಯಪ್ನಗರ

ಸಾಮಾಜಿಕ ಕಳಕಳಿಯಿಂದ ಕೆಲಸ ಮಾಡಿದರೆ ಅಭಿವೃದ್ಧಿ ಸಾಧ್ಯ

ಗೋಕಾಕ: ಸಾಮಾಜಿಕ ಕಳಕಳಿ ಹಾಗೂ ...

Vijaya Karnataka 31 Jul 2019, 5:00 am
ಗೋಕಾಕ : ಸಾಮಾಜಿಕ ಕಳಕಳಿ ಹಾಗೂ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ಮಾಡಿದರೆ ತಾಲೂಕಿನ ಅಭಿವೃದ್ಧಿ ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
Vijaya Karnataka Web BEL-30GOK1


ಸೋಮವಾರ ನಗರದ ತಾಪಂ ಸಭಾಭವನದಲ್ಲಿ ಆಯೋಜಿಸಿದ್ದ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ತಾಲೂಕಿನ ಪ್ರತಿಯೊಂದು ಸರಕಾರಿ ಶಾಲೆಗೆ ಆವರಣ ಗೋಡೆ, ಶೌಚಾಲಯ ಮತ್ತು ಕ್ರೀಡಾ ಮೈದಾನ ನಿರ್ಮಿಸಬೇಕು. ಇದು ಕ್ಷೇತ್ರ ಶಿಕ್ಷ ಣಾಧಿಕಾರಿಗಳ ಜವಾಬ್ದಾರಿ. ಗ್ರಾಮದ ಸಮುದಾಯ ಆಸ್ತಿಗಳ ನಿರ್ವಹಣೆಗೆ ಗ್ರಾಮ ಪಂಚಾಯಿತಿಗಳಲ್ಲಿ ಪ್ರತ್ಯೇಕ ಅನುದಾನವಿದ್ದು ಅದನ್ನು ಉಪಯೋಗಿಸಿಕೊಳ್ಳಬೇಕೆಂದು ತಿಳಿಸಿದರು.

ಶಿಥಿಲಗೊಂಡಿರುವ ಶಾಲೆ, ಅಂಗನವಾಡಿ ಹಾಗೂ ಆಸ್ಪತ್ರೆ ಕಟ್ಟಡಗಳ ತುರ್ತು ಕಾಮಗಾರಿ ನಡೆಸಲು ಜಿಲ್ಲಾಧಿಕಾರಿಗಳ ನೈಸರ್ಗಿಕ ಫಂಡ್‌ನಲ್ಲಿ ಅನುದಾನ ಪಡೆಯಬಹುದಾಗಿದ್ದು ಅಂಥ ಶಾಲೆ, ಅಂಗನವಾಡಿ, ಆಸ್ಪತ್ರೆಗಳ ರಿಪೇರಿಗಾಗಿ ಎಸ್ಟಿಮೇಟ್‌ ತಯಾರಿಸಿ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಕಳುಹಿಸಬೇಕು. ಪ್ರತಿ ಗ್ರಾಪಂಗೆ ಒಂದರಂತೆ ತಾಲೂಕಿನಲ್ಲಿ ಒಟ್ಟು 10 'ಕಮ್ಯುನಿಟಿ ಕ್ಯಾಟಲ್‌ ಶೆಡ್‌' ನಿರ್ಮಾಣ ಮಾಡಬೇಕು ಎಂದು ಅವರು ಹೇಳಿದರು.

ಭೂಸೇನಾ ನಿಗಮದ ಅಧಿಕಾರಿ ಸಭೆಗೆ ಗೈರಾದ ಕಾರಣ ಅವರಿಗೆ ನೋಟಿಸ್‌ ನೀಡುವಂತೆ ತಾಪಂ ಅಧಿಕಾರಿಗೆ ಸಿಐಒ ಸೂಚನೆ ನೀಡಿದರು.

ಶಾಲೆಗೆ ನೋಡಲ್‌ ಅಧಿಕಾರಿ ನೇಮಿಸಿ:
ಗೋಕಾಕ ಮತ್ತು ಮೂಡಲಗಿ ತಾಲೂಕಿನ ಬಿಇಒ ತಮ್ಮ ವ್ಯಾಪ್ತಿಯ ಶಾಲೆಯಲ್ಲಿ ಯಾವುದಾದರೂ ಒಂದೇ ವಿಷಯದಲ್ಲಿ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣರಾದರೆ ಆ ವಿಷಯದ ಶಿಕ್ಷ ಕರಿಗೆ ನೋಟಿಸ್‌ ನೀಡಬೇಕು. ಜತೆಗೆ ಫಲಿತಾಂಶ ಹೆಚ್ಚಿಸುವಂತೆ ಕ್ರಮ ಕೈಕೊಳ್ಳಬೇಕು ಎಂದು ಜಿಪಂ ಸಿಇಒ ಸಲಹೆ ನೀಡಿದರು. ಎಲ್ಲ ಶಾಲೆಗೆ ನೋಡಲ್‌ ಅಧಿಕಾರಿಗಳನ್ನಾಗಿ ನೇಮಿಸಿ ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷ ಣ ಲಭಿಸುವಂತೆ ನೋಡಿಕೊಳ್ಳಬೇಕು. ಸರಕಾರ ನೀಡುವ ಬೈಸಿಕಲ್‌, ಶೂ-ಸಾಕ್ಸಗಳ ಗುಣಮಟ್ಟ ಪರಿಶೀಲಿಸಬೇಕು ಎಂದು ಅವರು ಸೂಚಿಸಿದರು.

ಪಿಡಿಒಗಳ ಸಭೆ
ಸಿಇಒ ಡಾ.ಕೆ.ವಿ.ರಾಜೇಂದ್ರ ಇದೇ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿದರು. ಕೆಲವು ಪಂಚಾಯಿತಿಗಳಲ್ಲಿ ಬೇಡದ ಕೆಲಸಗಳು ನಡೆಯುತ್ತಿವೆ. ಸರಕಾರಿ ಅಧಿಕಾರಿಗಳಾದ ನಾವು ಜನರ ಸೇವೆ ಮಾಡಲು ಬಂದಿದ್ದೇವೆ. ಪಿಡಿಒಗಳು ಗ್ರಾಪಂಗಳಲ್ಲಿ ಇದ್ದು ಸರಿಯಾಗಿ ಕೆಲಸ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಗೆ ಕೆಲಸ ನೀಡಿದರೆ ಗ್ರಾಮಗಳು ಅಭಿವೃದ್ಧಿಯಾಗುತ್ತವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ