ಆ್ಯಪ್ನಗರ

ಉಕ ಅಭಿವೃದ್ಧಿಗೆ ಪಕ್ಷ ಭೇದ ಮರೆತು ಶೀಘ್ರ ಸಿಎಂ ಜತೆ ಚರ್ಚೆ

ಉಕ ಅಭಿವೃದ್ಧಿಗೆ ಪಕ್ಷ ಭೇದ ಮರೆತು ಶೀಘ್ರ ಸಿಎಂ ಜತೆ ಚರ್ಚೆ

Vijaya Karnataka 28 Jul 2018, 5:00 am
ಬೆಳಗಾವಿ: ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರವಾಗಿ ಪಕ್ಷ ಭೇದ ಮರೆತು ಹಿರಿಯರಾದ ಬಸವರಾಜ ಹೊರಟ್ಟಿ, ಎ.ಎಸ್‌. ಪಾಟೀಲ ನಡಳ್ಳಿ ನೇತೃತ್ವದಲ್ಲಿ ಈ ಭಾಗದ ಶಾಸಕರು ಸೇರಿ ಶೀಘ್ರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸುವುದಾಗಿ ಮಾಜಿ ಸಚಿವ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.
Vijaya Karnataka Web satish jarakiholi new-1


ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ''ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಈ ಭಾಗಕ್ಕೆ ಅಭಿವೃದ್ಧಿ ಯೋಜನೆಗಳನ್ನು ನೀಡಲಾಗಿದೆ. ಈಗ ಕುಮಾರಸ್ವಾಮಿ ಮಂಡಿಸಿದ ಬಜೆಟ್‌ನಲ್ಲಿ ಹಾಸನ, ಮಂಡ್ಯ ಭಾಗಕ್ಕೆ 300 ಕೋಟಿಯಷ್ಟು ಅನುದಾನವನ್ನು ಹೆಚ್ಚಿಗೆ ನೀಡಲಾಗಿದೆ ಎನ್ನುವುದನ್ನೇ ಆಧಾರವಾಗಿಟ್ಟುಕೊಂಡು ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಕೇಳಲು ಆಗುವುದಿಲ್ಲ. ಇದನ್ನು ನಾನು ಬೆಂಬಲಿಸುವುದಿಲ್ಲ. ಆದರೆ ಈ ಭಾಗದ ಅಭಿವೃದ್ಧಿಯ ಹೊಣೆ ನಮ್ಮೆಲ್ಲರ ಮೇಲಿದೆ. ಅದನ್ನು ನಿಭಾಯಿಸುತ್ತೇವೆ'', ಎಂದು ತಿಳಿಸಿದರು.

''ನ್ಯಾಯಕ್ಕಾಗಿ ಹೋರಾಟಕ್ಕಿಳಿದವರ ಜತೆಗೆ ನಾವಿದ್ದೇವೆ. ಮಠಾಧೀಶರು ಮತ್ತು ಇತರೆ ಸಂಘಟನೆಯವರು ಹಮ್ಮಿಕೊಂಡಿರುವ ಪ್ರತಿಭಟನೆಗಳಿಗೆ ನಮ್ಮ ಸಹಮತವಿದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿರುವುದು ಎಲ್ಲರಿಗೂ ಮನವರಿಕೆಯಾದರೆ ಶಾಸಕರು ಒಟ್ಟು ಸೇರಿ ಹೋರಾಟಕ್ಕೆ ಧುಮುಕುತ್ತೇವೆ. ಈ ಭಾಗದಲ್ಲಿ ಜೆಡಿಎಸ್‌ಗೆ ಮತ ಸಿಗದಿರುವುದರಿಂದ ಕುಮಾರಸ್ವಾಮಿಗೆ ಅನ್ಯಾಯವಾಗಿರಬಹುದು. ಆದರೆ ನಾವು ಜನರೊಂದಿಗೆ ಇದ್ದೇವೆ. ಅವರ ಬೇಡಿಕೆಗಳಿಗೆ ಸ್ಪಂದಿಸುತ್ತೇವೆ'', ಎಂದರು.

ಮುಂದಿನ ಎರಡು ವರ್ಷಗಳವರೆಗೆ ನಾನು ಯಾವುದೇ ಅಧಿಕಾರದ ಯೋಚನೆ ಮಾಡಲಾರೆ. ಲೋಕಸಭೆ ಚುನಾವಣೆ ಇನ್ನೂ ದೂರ ಇರುವುದರಿಂದ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿ ವಿಚಾರವಾಗಿ ಯಾವುದೇ ನಿರ್ಧಾರವಾಗಿಲ್ಲ ಎಂದು ಸತೀಶ್‌ ಜಾರಕಿಹೊಳಿ ಹೇಳಿದರು.

ಮೇಯರ್‌ ಬಸಪ್ಪ ಚಿಕ್ಕಲದಿನ್ನಿ, ಲಕ್ಷ್ಮಣರಾವ್‌ ಚಿಂಗಳೆ, ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ