ಆ್ಯಪ್ನಗರ

ವಾಜಪೇಯಿ ಅಸ್ಥ ಕಳಸಕ್ಕೆ ಭಕ್ತಿಯ ಪೂಜೆ

ಬೈಲಹೊಂಗಲ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ರಥವನ್ನು ಕೇಂದ್ರ ಮಾಜಿ ಸಚಿವ ಬಾಬಾಗೌಡ ಪಾಟೀಲ, ಮಾಜಿ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಡಾ...

Vijaya Karnataka 26 Aug 2018, 5:00 am
ಬೈಲಹೊಂಗಲ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ರಥವನ್ನು ಕೇಂದ್ರ ಮಾಜಿ ಸಚಿವ ಬಾಬಾಗೌಡ ಪಾಟೀಲ, ಮಾಜಿ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಡಾ. ವಿಶ್ವನಾಥ ಪಾಟೀಲ ಪಟ್ಟಣದಲ್ಲಿ ಶನಿವಾರ ಭರಮಾಡಿಕೊಂಡು, ಪೂಜೆ ಸಲ್ಲಿಸಿದರು.
Vijaya Karnataka Web BEL-25HTP1


ರಥವನ್ನು ಪಟ್ಟಣದ ಚನ್ನಮ್ಮನ ಆಶ್ವಾರೂಢ ಮೂರ್ತಿಯಿಂದ ಇಂಚಲ ಕ್ರಾಸ್‌, ಬಸ್‌ ನಿಲ್ದಾಣ, ಎಸ್‌.ಆರ್‌. ಸರ್ಕಲ್‌ ಮೂಲಕ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ದಾರಿಯುದ್ದಕ್ಕೂ ಅಟಲ್‌ ಬಿಹಾರಿ ವಾಜಪೇಯಿ ಭಾವಚಿತ್ರಕ್ಕೆ ನಾಗರಿಕರು ಪಕ್ಷಾತೀತವಾಗಿ ಹಾಗೂ ಅಭಿಮಾನಿಗಳು, ವಿದ್ಯಾರ್ಥಿಗಳು ಭಕ್ತಿಯಿಂದ ನಮಸ್ಕರಿಸಿದರು.

ಕೇಂದ್ರ ಮಾಜಿ ಸಚಿವ ಬಾಬಾಗೌಡ ಪಾಟೀಲ ಮಾತನಾಡಿ, ಅಟಲ್‌ ಬಿಹಾರಿ ವಾಜಪೇಯಿ ಅವರು ನಿಸ್ವಾರ್ಥದಿಂದ ದೇಶದ ಪ್ರಗತಿಗೆ ಶ್ರಮಿಸಿದ ಧೀಮಂತ ನಾಯಕರು. ತಮಗೆ ವೈಯಕ್ತಿಕವಾಗಿ ಆಸ್ತಿ, ಸಂಪತ್ತು ಗಳಿಸಿದವರಲ್ಲ. ಭಾರತದ ಪ್ರಗತಿಗೆ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿದ್ದರು. ಅವರು ಅಪರೂಪದ ವ್ಯಕ್ತಿತ್ವ ಹೊಂದಿದ್ದರು. ಅವರ ತತ್ವಾದರ್ಶಗಳನ್ನು ಇಂದಿನ ರಾಜಕಾರಣಿಗಳು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಮಾತನಾಡಿ, ಅಟಲ್‌ ಬಿಹಾರಿ ವಾಜಪೇಯಿ ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ವಾಜಪೇಯಿ ಅವರ ಚಿತಾಭಸ್ಮ ವಿಸರ್ಜನೆ ಕಾರ್ಯಕ್ರಮವನ್ನು ದೇಶದ 100 ಪ್ರಮುಖ ನದಿಗಳಲ್ಲಿ ವಿಸರ್ಜನೆ ಮಾಡಲಾಗುತ್ತಿದೆ ಎಂದರು.

ಈರಣ್ಣಾ ಕಡಾಡಿ, ಮುರಳೀಧರ ಮಾಳೋದೆ, ಗುರುಪಾದ ಕಳ್ಳಿ, ಶ್ರೀಶೈಲ ಯಡಳ್ಳಿ, ಮಡಿವಾಳಪ್ಪಾ ಹೋಟಿ, ಮುರುಗೇಶ ಗುಂಡ್ಲೂರ, ಮಹೇಶ ಹರಕುಣಿ, ಗುರು ಮೆಟಗುಡ್ಡ, ಆನಂದ ಮೂಗಿ, ಸಂಜಯ ಗಿರೆಪ್ಪಗೌಡರ, ಆಸೀಫ್‌ ಗೋವೆ, ಬಸವರಾಜ ಶಿಂತ್ರಿ, ಐ.ಎಲ್‌. ಪಾಟೀಲ, ಬಿ.ಬಿ. ಸಂಗನಗೌಡರ, ಬಸವರಾಜ ನೇಸರಗಿ, ಉಮೇಶಗೌಡ ಪಾಟೀಲ ಹಾಗೂ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು, ವಾಜಪೇಯಿ ಅಭಿಮಾನಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ