ಆ್ಯಪ್ನಗರ

ಮೂಲ ಸೌಲಭ್ಯಕ್ಕೆ ಆಗ್ರಹಿಸಿ 24ರಂದು ಧರಣಿ

ಮೂಡಲಗಿ: ಇಲ್ಲಿನ ಪುರಸಭೆಯ ಎಂಟು ವಾರ್ಡ್‌ಗಳಲ್ಲಿ ಮೂಲ ಸೌಲಭ್ಯ ಒದಗಿಸಲು ಕಾಮಗಾರಿ ಕೈಗೊಳ್ಳದಿರುವುದನ್ನು ಖಂಡಿಸಿ ಜು...

Vijaya Karnataka 22 Jul 2019, 5:00 am
ಮೂಡಲಗಿ : ಇಲ್ಲಿನ ಪುರಸಭೆಯ ಎಂಟು ವಾರ್ಡ್‌ಗಳಲ್ಲಿ ಮೂಲ ಸೌಲಭ್ಯ ಒದಗಿಸಲು ಕಾಮಗಾರಿ ಕೈಗೊಳ್ಳದಿರುವುದನ್ನು ಖಂಡಿಸಿ ಜು. 24ರಂದು ಪುರಸಭೆ ಆವರಣದಲ್ಲಿ ಅನಿರ್ದಿಷ್ಟ ಅವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಹೇಳಿದರು.
Vijaya Karnataka Web BEL-21MDL1


ಸ್ಥಳೀಯ ಸಮರ್ಥ ಶಾಲೆಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆಯ ಚುನಾವಣಾ ಪೂರ್ವದಲ್ಲಿ 23 ವಾರ್ಡ್‌ಗಳಿಗೆ ಕಾವåಗಾರಿಯ ಟೆಂಡರ್‌ ಆಗಿತ್ತು. ವಿಧಾನಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಾದ ಕಾರಣ ಕಾಮಗಾರಿ ನಡೆಯಲಿಲ್ಲ. ನಂತರ ನಡೆದ ಪುರಸಭೆ ಚುನಾವಣೆಯಲ್ಲಿ 2018-19ನೇ ಸಾಲಿನಲ್ಲಿ ಜೆಡಿಎಸ್‌ ಗೆದ್ದಿರುವ ವಾರ್ಡ್‌ ಸಂಖ್ಯೆ 3, 4, 6, 7, 9, 10, 17, 19ರಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡಿಲ್ಲ. ಇದಕ್ಕೆ ರಾಜಕೀಯ ದುರುದ್ದೇಶವೇ ಕಾರಣ. ಈ ವಿಷಯ ಕುರಿತು ಜಿಲ್ಲಾಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿಕೊಂಡರೂ ಸೂಕ್ತ ಪರಿಹಾರ ದೊರಕಿಲ್ಲ. ಆ ಕಾರಣಕ್ಕಾಗಿ ಪುರಸಭೆಯ ಆವರಣದಲ್ಲಿ ಜು. 24ರಂದು ಧರಣಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಪುರಸಭೆ ಸದಸ್ಯರಾದ ಶಿವಾನಂದ ಸಣ್ಣಕ್ಕಿ, ಆದಮ್‌ ತಾಂಬೋಳಿ, ಚನ್ನಪ್ಪ ಅಥಣಿ, ಮಲ್ಲಪ್ಪ ತೇರದಾಳ, ಚನ್ನಬಸಪ್ಪ ರುದ್ರಪೂರ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ