ಆ್ಯಪ್ನಗರ

ವಿನಯ್ ಕುಲಕರ್ಣಿಗೆ ರಾಜಾತಿಥ್ಯ ಆರೋಪ; ಹಿಂಡಲಗಾ ಜೈಲಿಗೆ ಡಿಐಜಿ ದಿಢೀರ್ ಭೇಟಿ

ವಿನಯ್‌ ಕುಲಕರ್ಣಿ ಅವರಿಗೆ ಹೊರಗಿನಿಂದ ಆಹಾರ ಪೂರೈಕೆಯಾಗುತ್ತವೆ, ಅವರ ಸೇವೆಗೆ ನಾಲ್ಕೈದು ಆಳುಗಳು ಇದ್ದಾರೆ, ಅಲ್ಲದೆ, ಜೈಲಿನ ಸಿಬ್ಬಂದಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ಡಿಐಜಿ ಸೋಮಶೇಖರ್‌ ಅವರು ಮಧ್ಯಾಹ್ನ ಕಾರಾಗೃಹಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

Vijaya Karnataka Web 4 Dec 2020, 10:38 am
ಬೆಳಗಾವಿ: ಧಾರವಾಡ ಜಿಪಂ ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣದ ಆರೋಪಿ, ಮಾಜಿ ಸಚಿವ ವಿನಯ್‌ ಕುಲಕರ್ಣಿಗೆ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬಂಧಿಖಾನೆ ಇಲಾಖೆ ಡಿಐಜಿ ಸೋಮಶೇಖರ್‌ ಬುಧವಾರ ಜೈಲಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.
Vijaya Karnataka Web hindalga jail hindalaga


ಜಮ್ಮು ಕಾಶ್ಮೀರದಲ್ಲಿ ಬೆಳಗಾವಿ ಮೂಲದ ಯೋಧ ಆತ್ಮಹತ್ಯೆ ಶಂಕೆ..!

ಜೈಲಿನಲ್ಲಿರುವ ವಿನಯ್‌ ಕುಲಕರ್ಣಿ ಅವರಿಗೆ ಹೊರಗಿನಿಂದ ಆಹಾರ ಪೂರೈಕೆಯಾಗುತ್ತವೆ, ಅವರ ಸೇವೆಗೆ ನಾಲ್ಕೈದು ಆಳುಗಳು ಇದ್ದಾರೆ, ಅಲ್ಲದೆ, ಜೈಲಿನ ಸಿಬ್ಬಂದಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆ ಹಿನ್ನೆಲೆಯಲ್ಲಿ ಡಿಐಜಿ ಸೋಮಶೇಖರ್‌ ಅವರು ಮಧ್ಯಾಹ್ನ ಕಾರಾಗೃಹಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಜೈಲು ಭೇಟಿ ಕುರಿತು ಮಾಧ್ಯಮದವರೊಂದಿಗೆ ಮಾತನಾಡಲು ನಿರಾಕರಿಸಿದರು.

ರೈತರನ್ನು ಹೇಡಿಗಳೆಂದು ಜರಿಯುತ್ತೀರಾ? ಹೊಟ್ಟೆಗೆ ಏನ್‌ ತಿಂತಿದ್ದೀರಾ?’ ; ಬಿಸಿ ಪಾಟೀಲ್‌ಗೆ ಸಿದ್ದರಾಮಯ್ಯ ಕ್ಲಾಸ್‌

ಜೈಲಿನಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳನ್ನು ಕಾರಾಗೃಹದ ಸೂಪರಿಂಟೆಂಡೆಂಟ್‌ ಕೃಷ್ಣಕುಮಾರ್‌ ಅಲ್ಲಗಳೆದಿದ್ದಾರೆ. ವಿನಯ್‌ ಕುಲಕರ್ಣಿ ಅವರಿಗೆ ಕುಟುಂಬದವರು ತಲುಪಿಸಿದ್ದ ಬಟ್ಟೆಗಳು ಹಾಗೂ ಮಾತ್ರೆಗಳನ್ನು ಪರಿಶೀಲಿಸಿ ಕೊಡಲಾಗಿತ್ತು. ಅವರಿಗೆ ಜೈಲಿನ ಊಟವನ್ನೇ ನೀಡಲಾಗುತ್ತಿದೆ. ಹಾಸಿಗೆಯನ್ನೂ ಕೊಟ್ಟಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಹೊರಗಿನವರ ಭೇಟಿಗೆ ಅವಕಾಶ ಕೊಟ್ಟಿಲ್ಲ. ವಕೀಲರು ಹಾಗೂ ಕುಟುಂಬದವರ ಸಂಪರ್ಕಕ್ಕೆ ಸ್ಥಿರ ದೂರವಾಣಿಯನ್ನು ಅಧಿಕಾರಿಗಳ ಸಮ್ಮುಖದಲ್ಲೇ ಒದಗಿಸಲಾಗುತ್ತಿದೆ. ಅದನ್ನು ದಾಖಲಿಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ