ಆ್ಯಪ್ನಗರ

ಸಂತ್ರಸ್ತರ ನೆರವಿಗೆ ಜಿಲ್ಲಾಡಳಿತ ಸಿದ್ಧ

ಗೋಕಾಕ: ಪ್ರವಾಹ ಸಂತ್ರಸ್ತರಿಗೆ ಸರಕಾರದಿಂದ ಸಿಗುವ ಎಲ್ಲ ಸವಲತ್ತುಗಳನ್ನು ...

Vijaya Karnataka 14 Aug 2019, 5:00 am
ಗೋಕಾಕ: ಪ್ರವಾಹ ಸಂತ್ರಸ್ತರಿಗೆ ಸರಕಾರದಿಂದ ಸಿಗುವ ಎಲ್ಲ ಸವಲತ್ತುಗಳನ್ನು ನೀಡಲು ಜಿಲ್ಲಾಡಳಿತವು ಸಜ್ಜಾಗಿದೆ ಎಂದು ಬೆಳಗಾವಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎಸ್‌.ಬಿ.ಮುಳ್ಳ ಹೇಳಿದರು.
Vijaya Karnataka Web BEL-13GOK3


ಮಂಗಳವಾರ ತಾಲೂಕಿನ ಖನಗಾಂವ ಗ್ರಾಮದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರ ನಾಶವಾದ ಆಸ್ತಿ ಹಾಗೂ ಜಾನುವಾರುಗಳ ಮಾಹಿತಿ ಪಡೆದು ನಂತರ ಮಾತನಾಡಿದ ಅವರು, ''ಈಗಾಗಲೇ ಪಿಡಿಒಗಳು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಜಂಟಿಯಾಗಿ ಪ್ರವಾಹದಿಂದ ಸಂತ್ರಸ್ತರಿಗೆ ಆದ ಹಾನಿಯ ಮಾಹಿತಿ ಸಲ್ಲಿಸಿದ್ದು ಸದರಿ ವರದಿ ಆಧಾರದ ಮೇಲೆ ಸರಕಾರದಿಂದ ಸಮರೋಪಾದಿಯಲ್ಲಿ ಪರಿಹಾರವನ್ನು ನೀಡಲಾಗುತ್ತದೆ. ಕಾರಣ ಸಂತ್ರಸ್ತರು ಆತಂಕ ಪಡುವ ಅಗತ್ಯವಿಲ್ಲ'' ಎಂದು ಆತ್ಮಸ್ಥೈರ್ಯ ತುಂಬಿದರು.

ತಾಪಂ ಸಹಾಯಕ ನಿರ್ದೇಶಕ (ಗ್ರಾ.ಉ) ಎಸ್‌.ಎಚ್‌.ದೇಸಾಯಿ, ಪಿಆರ್‌ಇಡಿ ಕಾರ್ಯನಿರ್ವಾಹಕ ಅಭಿಯಂತರ ಐ.ಎಮ್‌.ದಫೇದಾರ, ನೋಡಲ್‌ ಅಧಿಕಾರಿ ಎಮ್‌.ಡಿ.ಸರಕಾವಸ್‌, ಪಿಡಿಒ ಉಮೇಶ ಮನಗೂಳಿ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ