ಆ್ಯಪ್ನಗರ

ಶ್ರೀಗಳಿಗೆ ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಹೇಳಿಕೆ: ಕ್ಷಮೆ ಕೋರಿದ ಡಿಕೆ ಶಿವಕುಮಾರ್‌

ಶ್ರೀಗಳ ಹೆಸರಿನ ಹೆಸರೇ ನನ್ನ ಹೆಸರು ಆಗಿದೆ. ನಾನು ಶ್ರೀಗಳ ಅತಿ ದೊಡ್ಡ ಅಭಿಮಾನಿ. ಕೆಲವರು ರಾಜಕೀಯ ಲಾಭಕ್ಕಾಗಿ ಶ್ರೀಗಳ ಬಗ್ಗೆ ಭಕ್ತಿ ತೋರುತ್ತಾರೆ. ಆದರೆ ನನಗೆ ಅವರ ಬಗ್ಗೆ ಅಪಾರವಾದ ಗೌರವ, ಅಭಿಮಾನ ಇದೆ ಎಂದು ಡಿಕೆಶಿ ತಿಳಿಸಿದರು.

Vijaya Karnataka Web 10 Dec 2018, 5:10 pm
ಬೆಳಗಾವಿ: ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಸಿದ್ದಗಂಗಾ ಶ್ರೀಗಳಿಗೆ ಅಲ್ಪಸಂಖ್ಯಾತ ವೈದ್ಯರೊಬ್ಬರು ಅತ್ಯುತ್ತಮವಾದ ಚಿಕಿತ್ಸೆ ನೀಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಈಗ ಕ್ಷಮೆಯಾಚಿಸಿದ್ದಾರೆ.
Vijaya Karnataka Web ಡಿಕೆ ಶಿವಕುಮಾರ್‌
ಡಿಕೆ ಶಿವಕುಮಾರ್‌


ಬೆಳಗಾವಿಯಲ್ಲಿ ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ ಡಿ.ಕೆ. ಶಿವಕುಮಾರ್‌, ತಮಿಳುನಾಡಿನ ಅತ್ಯುತ್ತಮ ವೈದ್ಯರು ಚಿಕಿತ್ಸೆ ನೀಡಿದ್ದಾರೆ ಎಂದು ಹೇಳಿದ್ದೇನೆ. ಅಲ್ಪಸಂಖ್ಯಾತರ ಹೆಸರಿನಲ್ಲಿ ಆಸ್ಪತ್ರೆ ಮಾಡಿ ಅತ್ಯುತ್ತಮವಾದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದೇನೆ ಎಂದರು.

ಶ್ರೀಗಳ ಹೆಸರಿನ ಹೆಸರೇ ನನ್ನ ಹೆಸರು ಆಗಿದೆ. ನಾನು ಶ್ರೀಗಳ ಅತಿ ದೊಡ್ಡ ಅಭಿಮಾನಿ. ಕೆಲವರು ರಾಜಕೀಯ ಲಾಭಕ್ಕಾಗಿ ಶ್ರೀಗಳ ಬಗ್ಗೆ ಭಕ್ತಿ ತೋರುತ್ತಾರೆ. ಆದರೆ ನನಗೆ ಅವರ ಬಗ್ಗೆ ಅಪಾರವಾದ ಗೌರವ, ಅಭಿಮಾನ ಇದೆ ಎಂದು ಡಿಕೆಶಿ ತಿಳಿಸಿದರು.

ಬಿಜೆಪಿಯವರು ನನ್ನ ಹೇಳಿಕೆಯನ್ನು ರಾಜಕೀಯಗೊಳಿಸಲು ಮುಂದಾಗಿದ್ದಾರೆ. ಆದರೆ ನಾನು ಯಾರಿಗೂ ಹೆದರುವುದಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೇಳಲು ಸಿದ್ಧ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನನ್ನ ಬೆಳವಣಿಗೆ, ಏಳಿಗೆಯನ್ನು ಸಹಿಸದ ಬಿಜೆಪಿ ನಾಯಕರು ನನ್ನ ಪ್ರತಿ ಹೇಳಿಕೆಯನ್ನೂ ರಾಜಕೀಯ ಮಾಡುತ್ತಿದ್ದಾರೆ. ಇದಕ್ಕೆ ನಾನು ಕೇರ್‌ ಮಾಡಲ್ಲ ಎಂದು ಸಚಿವ ಡಿಕೆ ಶಿವಕುಮಾರ್‌ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ