ಆ್ಯಪ್ನಗರ

ಬಿಜೆಪಿ ಹೆಚ್ಚು ಮತ ನೀಡಿದ್ದಕ್ಕೆ ಕುಡಿವ ನೀರು ಪೂರೈಕೆ ಬಂದ್‌

ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಮತಗಳು ಸಿಕ್ಕ ಪ್ರದೇಶಗಳಲ್ಲಿ ಕುಡಿಯುವ ನೀರಿನ ...

Vijaya Karnataka 15 Jun 2018, 5:00 am
ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಮತಗಳು ಸಿಕ್ಕ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿರ್ಮಿಸಲಾಗುತ್ತಿದೆ ಎಂದು ಯಮಕನಮರಡಿ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಮಾರುತಿ ಅಷ್ಟಗಿ ಆರೋಪಿಸಿದ್ದಾರೆ.
Vijaya Karnataka Web BLG-1406-2-52-14MAHESH8A


ಈಚೆಗೆ ನಡೆದ ಚುನಾವಣೆಯಲ್ಲಿ ಯಮಕನಮರಡಿ ಕ್ಷೇತ್ರದ ಅಷ್ಠೆ ಗ್ರಾಮದಲ್ಲಿ ಬಿಜೆಪಿಗೆ ಅತೀ ಹೆಚ್ಚು ಮತಗಳು ಸಿಕ್ಕಿದ್ದವು. ಈ ಹಿನ್ನೆಲೆಯಲ್ಲಿ ದ್ವೇಷ ರಾಜಕಾರಣ ಮಾಡುತ್ತಿರುವ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗರು ಕಳೆದ 15 ದಿನಗಳಿಂದ ಗ್ರಾಮದಲ್ಲಿ ಕೊಳವೆಬಾವಿಗಳ ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸಿ ಕುಡಿಯುವ ನೀರು ಪೂರೈಕೆ ನಿಲ್ಲಿಸಿದ್ದಾರೆ. ಈ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೂಡ ಸಮರ್ಪಕ ಉತ್ತರ ನೀಡದೆ ಜಾರಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ತಕ್ಷಣ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳದಿದ್ದರೆ ಶುಕ್ರವಾರದಿಂದಲೆ ಪಂಚಾಯಿತಿ ಮುಂದೆ ಖಾಲಿ ಕೊಡಗಳೊಂದಿಗೆ ಧರಣಿ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಅಷ್ಠೆ ಗ್ರಾಮ ಸೇರಿದಂತೆ ಬಿಜೆಪಿಗೆ ಹೆಚ್ಚು ಮತಗಳು ಸಿಕ ಮನಗುತ್ತಿ, ಅಗಸಗಾ, ಹಂದಿಗನೂರು ಗ್ರಾಮಗಳಲ್ಲೂ ಮೂಲ ಸೌಲಭ್ಯಕ್ಕೆ ಕತ್ತರಿ ಹಾಕಿ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಿಸಲಾಗುತ್ತಿದೆ ಎಂದು ಮಾರುತಿ ಅಷ್ಠಗಿ ಸಾಮಾಜಿಕ ಜಾಲತಾಣಗಳಲ್ಲೂ ಪೋಸ್ಟ್‌ ಮಾಡಿದ್ದಾರೆ.

ಶಾಸಕರ ಆಪ್ತ ಸಹಾಯಕರು ಎನ್ನಲಾದ ಕೆಲವರು ಉದೇಶಪೂರ್ವಕವಾಗಿ ಬಿಜೆಪಿ ಬೆಂಬಲಿಸುವ ಗಲ್ಲಿಗಳಲ್ಲಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಗ್ರಾಮ ಮಟ್ಟದ ಕೆಲ ಅಧಿಕಾರಿಗಳೂ ಬೆಂಬಲಿಗರ ಕೈಯಾಳುಗಳಂತೆ ವರ್ತಿಸುತ್ತಿದ್ದಾರೆ. ಈ ಕುರಿತು ಉಪ ವಿಭಾಗಾಧಿಕಾರಿಗಳೊಂದಿಗೆ ಕುರಿತು ಚರ್ಚಿಸಲಾಗಿದೆ. ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುತ್ತೇವೆ.
- ಮಾರುತಿ ಅಷ್ಟಗಿ, ಬಿಜೆಪಿ ಪರಾಜಿತ ಅಭ್ಯರ್ಥಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ