ಆ್ಯಪ್ನಗರ

ಸಿಎಎ ವಿರೋಧಿಸಿ ಡಿಎಸ್‌ಎಸ್‌ ಪ್ರತಿಭಟನೆ

ಬೆಳಗಾವಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ...

Vijaya Karnataka 21 Jan 2020, 5:00 am
ಬೆಳಗಾವಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಸೋಮವಾರ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಪ್ರತಿಭಟನೆ ನಡೆಸಿದರು.
Vijaya Karnataka Web 20LBS5_53
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.


ಕೇಂದ್ರ ಸರಕಾರ ಸರ್ವ ಧರ್ಮವನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸಬೇಕು. ಆದರೆ, ಒಂದು ಧರ್ಮವನ್ನು ಹೊರಗಿಟ್ಟು ಪೌರತ್ವ ಕಾಯ್ದೆ ಜಾರಿಗೆ ತಂದಿರುವುದು ಸರಿಯಲ್ಲ. ಇದರಿಂದ ದೇಶದಲ್ಲಿಜಾತಿಗಳ ನಡುವೆ ದ್ವೇಷ ಬೆಳೆಯುತ್ತದೆ. ಹಿಂದುಳಿದ ಸಮುದಾಯದ ಶೇ.80 ರಷ್ಟು ಜನರ ಹತ್ತಿರ ಸರಿಯಾದ ದಾಖಲೆಗಳಿಲ್ಲ. ಅಂತಹ ಜನರಿಗೆ ಸಮಸ್ಯೆಯಾಗುತ್ತದೆ. ಅನೇಕ ತಜ್ಞರು ಕೂಡ ಕಾಯ್ದೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಕಾಯ್ದೆ ವಾಪಸ್‌ ಪಡೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಮಿತಿ ಮುಖಂಡರಾದ ಶ್ರೀಕಾಂತ ತಳವಾರ, ಸಂಜಯ ತಳವಲಕರ, ಮಚ್ಛೇಂದ್ರ ಕಾಂಧೆಕರ, ಅಮೀನಸಾಬ್‌ ಜಾತಗಾರ ಮೊದಲಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ