ಆ್ಯಪ್ನಗರ

ಶಿಕ್ಷ ಣ, ತಂತ್ರಜ್ಞಾನ ಜತೆಯಲ್ಲಿ ಸಾಗಲಿ

ಬೆಳಗಾವಿ : ಪ್ರೊಜೆಕ್ಟ್ ಪ್ರದರ್ಶನ ವಿದ್ಯಾರ್ಥಿಗಳ ...

Vijaya Karnataka 27 Jul 2019, 5:00 am
ಬೆಳಗಾವಿ : ಪ್ರೊಜೆಕ್ಟ್ ಪ್ರದರ್ಶನ ವಿದ್ಯಾರ್ಥಿಗಳ ಕೌಶಲ ಹಾಗೂ ಸಂಶೋಧನಾತ್ಮಕ ಪ್ರತಿಭೆ ಪ್ರದರ್ಶಿಸುವ ಉತ್ತಮ ವೇದಿಕೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವ ಡಾ.ಆನಂದ ದೇಶಪಾಂಡೆ ಹೇಳಿದರು.
Vijaya Karnataka Web BEL-26 LBS 15


ನಗರದ ಕೆಎಲ್‌ಇ ಸಂಸ್ಥೆಯ ಡಾ. ಎಂ.ಎಸ್‌.ಶೇಷಗಿರಿ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಹಾಗೂ ಬೆಂಗಳೂರಿನ ಭಾರತೀಯ ವಿಜ್ಞಾನ ಮಹಾವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 42ನೇ ಆವೃತ್ತಿಯ ರಾಜ್ಯ ಮಟ್ಟದ ಪ್ರೊಜೆಕ್ಟ್ ಪ್ರದರ್ಶನ ಕಾರ‍್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷ ಣ ಮತ್ತು ತಂತ್ರಜ್ಞಾನ ಜೊತೆಯಾಗಿ ಸಾಗಬೇಕು. ಪ್ರೊಜೆಕ್ಟ್ ಆಧಾರಿತ ತಾಂತ್ರಿಕ ಶಿಕ್ಷ ಣವು ಎಂಜಿನಿಯರಿಂಗ್‌ ವಿದ್ಯಾರ್ಥಿಗಳಲ್ಲಿ ಸಂಶೋಧನಾತ್ಮಕ ಗುಣಗಳನ್ನು ಬೆಳೆಸುವುದರೊಂದಿಗೆ ತಂತ್ರಜ್ಞಾನವನ್ನು ಸಾಮಾನ್ಯ ಜನರಿಗೆ ತಲುಪಿಸುವಲ್ಲಿ ಸಹಾಯಕವಾಗಲಿದೆ ಎಂದರು.

ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಡಾ. ಎಚ್‌.ಹೊನ್ನೆಗೌಡ ಮಾತನಾಡಿ, ದೇಶದ ಆರ್ಥಿಕತೆಯ ಬೆಳವಣಿಗೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಮಹತ್ವದ ಪಾತ್ರವಹಿಸುತ್ತಿದೆ. ಜತೆಗೆ ತ್ವರಿತ ಬೆಳವಣಿಗೆಯಿಂದ ಉದ್ದಿಮೆಗಳಲ್ಲಿ ಕ್ರಾಂತಿಕಾರಕ ಬದಲಾವಣೆಗಳಾಗುತ್ತಿವೆ. ಎಂಜಿನಿಯರಿಂಗ್‌ ಕಾಲೇಜುಗಳು ಅಂತರ ವಿಭಾಗ ಪ್ರೊಜೆಕ್ಟಗಳನ್ನು ತೆಗೆದುಕೊಳ್ಳುವುದರಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ಸುಲಭ ಪರಿಹಾರ ದೊರಕಿಸಬಹುದು ಎಂದು ತಿಳಿಸಿದರು.

ಕಾಲೇಜಿನ ಆಡಳಿತ ಮಂಡಳಿ ಮುಖ್ಯಸ್ಥ ಎಸ್‌.ಸಿ.ಮೆಟಗುಡ್‌, ಕೆಎಸ್‌ಸಿಎಸ್‌ಟಿಯ ಕಾರ್ಯದರ್ಶಿ ಸುಬ್ರಮಣಿಯನ್‌, ಪ್ರಾಚಾರ್ಯ ಡಾ. ಬಸವರಾಜ ಕಟಗೇರಿ, ಡಾ. ದೀಪಕ ಕುಲಕರ್ಣಿ, ಡಾ. ಉಮೇಶ ದೇಶನ್ನವರ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ