ಆ್ಯಪ್ನಗರ

ರೇಷನ್‌ ಅಂಗಡಿ ಸರ್ವರ್‌ ಸಮಸ್ಯೆ ನಿವಾರಿಸಿ

ಬೆಳಗಾವಿ: ನ್ಯಾಯ ಬೆಲೆ ಅಂಗಡಿಗಳ ಸರ್ವರ್‌ ಸಮಸ್ಯೆ ...

Vijaya Karnataka 20 Sep 2019, 5:00 am
ಬೆಳಗಾವಿ: ನ್ಯಾಯ ಬೆಲೆ ಅಂಗಡಿಗಳ ಸರ್ವರ್‌ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಗುರುವಾರ ಕರ್ನಾಟಕ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.
Vijaya Karnataka Web 19 LBS 2_53


ಕಳೆದ ಮೂರು ತಿಂಗಳಿಂದ ನ್ಯಾಯಬೆಲೆ ಅಂಗಡಿಗಳ ಸರ್ವರ್‌ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಇದರಿಂದ ಪಡಿತರ ಹಂಚಿಕೆಯಲ್ಲಿವಿಳಂಬವಾಗುತ್ತಿದೆ. ಸಾಫ್ಟ್‌ವೇರ್‌ನಲ್ಲಿಪಡಿತರ ಚೀಟಿಯ ಮಾಹಿತಿ ಹಾಕಿದ ತಕ್ಷಣ ಸರ್ವರ್‌ ಸಮಸ್ಯೆ ಎದುರಾಗುತ್ತಿದೆ. ನಿರಂತರ ಸರ್ವರ್‌ ಸಮಸ್ಯೆಯಿಂದ ಸರಿಯಾದ ಸಮಯಕ್ಕೆ ಪಡಿತರ ವಿತರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರ್ವರ್‌ ಸಮಸ್ಯೆ ಸರಿಪಡಿಸುವಂತೆ ಜಿಲ್ಲಾಧಿಕಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.

ನ್ಯಾಯಬೆಲೆ ಅಂಗಡಿಗಳಿಗೆ ನೀಡಬೇಕಾದ ಕಮಿಷನ್‌ ಒಂದು ವರ್ಷದಿಂದ ನೀಡಿಲ್ಲ. ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿಕೊಂಡರೂ ಯಾವುದೇ ಪ್ರಯೋಜನೆಯಾಗಿಲ್ಲ. ತಕ್ಷಣ ಕಮಿಷನ್‌ ಹಣವನ್ನು ನ್ಯಾಯಬೆಲೆ ಅಂಗಡಿಗಳಿಗೆ ಪಾವತಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾಧ್ಯಕ್ಷ ಬೈರಗೌಡ ಪಾಟೀಲ, ಮಾರುತಿ ಪಾಟೀಲ, ರಾಜಶೇಖರ ತಳವಾರ, ಮಾರುತಿ ಅಂಬೋಳಕರ, ಸರೋಜಾ ದೊಡಮನಿ, ದಿನೇಶ ಬಾಡಗೆ, ಸುರೇಶ ರಾಜೂಕರ, ನಾರಾಯಣ ಕಾಲಕುಂದ್ರಿ ಮೊದಲಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ