ಆ್ಯಪ್ನಗರ

ನರೇಗಾ ಯೋಜನೆ ಕಾಮಗಾರಿ ಸ್ಥಳಕ್ಕೆ ಇಒ ಭೇಟಿ

ಕಕಮರಿ: ಗ್ರಾಮದ ಹೊರವಲಯದಲ್ಲಿ ನರೇಗಾ ಯೋಜನೆಯಲ್ಲಿ ಕೆರೆ ಹೂಳೆತ್ತುವ ಕಾಮಗಾರಿಯ ಸ್ಥಳಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿ ಬಂಗಾರೆಪ್ಪನವರ ...

Vijaya Karnataka 22 Jun 2019, 5:00 am
ಕಕಮರಿ : ಗ್ರಾಮದ ಹೊರವಲಯದಲ್ಲಿ ನರೇಗಾ ಯೋಜನೆಯಲ್ಲಿ ಕೆರೆ ಹೂಳೆತ್ತುವ ಕಾಮಗಾರಿಯ ಸ್ಥಳಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವಿ ಬಂಗಾರೆಪ್ಪನವರ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
Vijaya Karnataka Web BLG-2106-2-52-21 KAKAMARI 1


ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಲ್ಲಿ ಎಲ್ಲ ಕೃಷಿಕರಿಗೆ ವಾರ್ಷಿಕ 6 ಸಾವಿರ ರೂ. ಆರ್ಥಿಕ ನೆರವು ನೀಡುವ ಪ್ರಧಾನಮಂತ್ರಿ ಕಿಸಾನ್‌ ಯೋಜನೆಗೆ ಸೂಕ್ತ ದಾಖಲೆಗಳನ್ನು ಗ್ರಾಮ ಲೆಕ್ಕಾಧಿಕಾರಿ ಮತ್ತು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಬೇಕೆಂದು ಅವರು ಹೇಳಿದರು.

ಕೂಲಿ ಕಾರ್ಮಿಕರು ಮಾಡಿದ ಕೆಲಸಕ್ಕೆ ತಕ್ಕಂತೆ ವೇತನ ಎನ್ನುವ ನಿಯಮದನ್ವಯ ಯಾರು ಎಷ್ಟು ಕೆಲಸ ಮಾಡುತ್ತಾರೋ ಅಷ್ಟು ವೇತನ ನೀಡಲಾಗುವುದು ಎಂದ ಅವರು, ಅದರಲ್ಲಿ ಸ್ವಲ್ಪ ಬದಲಾವಣೆ ಮಾಡಿ ಸರಿಯಾದ ಕೂಲಿ ನೀಡಲು ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.

ನರೇಗಾ ಯೋಜನೆ ಸಹಾಯಕ ನಿರ್ದೇಶಕ ಅರುಣ ಮಾಚಕನೂರ, ಅಭಿವೃದ್ಧಿ ಅಧಿಕಾರಿ ಕೆ.ಆರ್‌. ಶಿವಾನಗೋಳ, ಗ್ರಾಪಂ ಸದಸ್ಯ ಮಲ್ಲಿಕಾರ್ಜುನ ಕನಮಡಿ, ಉಮೇಶ ತಂಗಡಿ ಸೇರಿದಂತೆ ಅನೇಕರು ಮತ್ತು ಕೂಲಿಕಾರ್ಮಿಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ