ಆ್ಯಪ್ನಗರ

ಪ್ರತಿಯೊಬ್ಬ ಕಾರ್ಯಕರ್ತರಿಗೂ ತರಬೇತಿ, ಪಕ್ಷವನ್ನು ಅಧಿಕಾರಕ್ಕೆ ತರಲು ಸತೀಶ್‌ ಜಾರಕಿಹೊಳಿ ಪ್ಲ್ಯಾನ್

ಘಟಪ್ರಭಾದಲ್ಲಿನ ಸೇವಾದಳ ತರಬೇತಿ ಕೇಂದ್ರವನ್ನು ಮತ್ತೆ ಪುನಶ್ಚೇತನ ಮಾಡಲಾಗುತ್ತಿದೆ‌. ಜಿಲ್ಲಾ, ತಾಲೂಕು ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ನೀಡಲಾಗುವುದು ಎಂದು ಜಾರಕಿಹೊಳಿ ಮಾಹಿತಿ ನೀಡಿದರು.

Vijaya Karnataka 4 Jul 2020, 5:19 pm

ಬೆಳಗಾವಿ : ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲೂ ಜಿ.ಪಂ., ವಿಧಾನಸಭೆ‌ ಚುನಾವಣೆಗಳು ಬರಬಹುದು. ಹೀಗಾಗಿ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರಿಗೂ ತರಬೇತಿ ನೀಡಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವಂತೆ ಮಾಡಲಾಗುವುದು ಎಂದು ಕೆಪಿಸಿಸಿ‌ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
Vijaya Karnataka Web Satish Jarkiholi


ನಗರದ ಕಾಂಗ್ರೆಸ್ ಭವನದಲ್ಲಿ ಶನಿವಾರ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, “ಹೈಕಮಾಂಡ್ ನಮಗೆ ದೊಡ್ಡ ಜವಾಬ್ದಾರಿ ನೀಡಿದೆ. ನಮ್ಮ ಹೋರಾಟ ಜಿಲ್ಲೆಗೆ ಮಾತ್ರ ಸೀಮಿತವಲ್ಲ. ಇಡೀ ರಾಜ್ಯಕ್ಕೆ ಮೀಸಲಾಗಿದೆ. ಕಾಂಗ್ರೆಸ್ ಇಲ್ಲಿಯವರೆಗೆ ಬೇರೆ ರೀತಿಯಲ್ಲಿ ಇತ್ತು, ಈಗ ಬದಲಾಗಿದೆ. ಹೊಸ ಹೊಸ‌ ತಂತ್ರಜ್ಞಾನದ ಮೊರೆ ಹೋಗಿದೆ. ಆನ್‌ಲೈನ್‌ನಲ್ಲಿಯೇ ಪಕ್ಷ ಸಂಘಟನೆ ಮಾಡಬಹುದು ಎಂದರು.

ಬಿಜೆಪಿ ಹಸಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸದೆ ಸುಳ್ಳು ಹೇಳಿ ದಾರಿ ತಪ್ಪಿಸುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಆಟ ಬಯಲು ಮಾಡಬೇಕಿದೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡಲಾಗುವುದು. ಕಾಂಗ್ರೆಸ್ ಕಾರ್ಯಕರ್ತರಿಗೆ ನಿರಂತರವಾಗಿ ಟ್ರೇನಿಂಗ್ ನೀಡಲಾಗುವುದು. ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ನೀಡುವ ಜವಾಬ್ದಾರಿ ನನ್ನ ಮೇಲಿದೆ‌ ಎಂದರು.
ಬಿಜೆಪಿ ಮಾದರಿಯಲ್ಲಿ ‘ಕೇಡರ್‌’ ಮೊರೆ ಹೋದ ಕಾಂಗ್ರೆಸ್‌, ಸತೀಶ್ ಜಾರಕಿಹೊಳಿಗೆ ಸಂಘಟನೆ ಹೊಣೆ?

ಘಟಪ್ರಭಾದಲ್ಲಿನ ಸೇವಾದಳ ತರಬೇತಿ ಕೇಂದ್ರವನ್ನು ಮತ್ತೆ ಪುನಶ್ಚೇತನ ಮಾಡಲಾಗುತ್ತಿದೆ‌. ಜಿಲ್ಲಾ, ತಾಲೂಕು ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಬೆಳಗಾವಿ ಜಿಲ್ಲೆ ಸೇರಿ ರಾಜ್ಯಾದ್ಯಂತ ಕೊರೊನಾ ಸಂದರ್ಭದಲ್ಲಿ ಸರಕಾರಕ್ಕಿಂತ ಕಾಂಗ್ರೆಸ್ ಪಕ್ಷ ಅತ್ಯುತ್ತಮ ಕೆಲಸ ಮಾಡಿದೆ. ಮುಂದೆಯೂ ಇದೆ ರೀತಿ ಎಲ್ಲ ಸಮಸ್ಯೆಗಳಿಗೆ ಕಾಂಗ್ರೆಸ್ ಸ್ಪಂದಿಸಲಿದೆ.

ಪದಗ್ರಹಣ ಕಾರ್ಯಕ್ರಮ ದೇಶಕ್ಕೆ ಮಾದರಿಯಾಗಿದೆ. ಸುಮಾರು 20 ಲಕ್ಷ ಜನ ವೀಕ್ಷಿಸಿದ್ದು, ದಾಖಲೆ‌ ನಿರ್ಮಿಸಿದೆ. ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಪ್ರತಿಯೊಬ್ಬರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಜಾರಕಿಹೊಳಿ ಹೇಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಮುಂತಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ