ಆ್ಯಪ್ನಗರ

ಸಿಎಂ ಮನವೊಲಿಸಲು ವಿಫಲ: ಸಂಗಪ್ಪಗೋಳ ಕಿಡಿ

ಸಂಗಪ್ಪಗೋಳ ಕಿಡಿ ವಿಕ ಸುದ್ದಿಲೋಕ ಚಿಕ್ಕೋಡಿ ಚಿಕ್ಕೋಡಿ ಜಿಲ್ಲೆ ರಚನೆ ಕುರಿತು ಮಾ...

Vijaya Karnataka 16 Mar 2018, 5:00 am

ಚಿಕ್ಕೋಡಿ: ಚಿಕ್ಕೋಡಿ ಜಿಲ್ಲೆ ರಚನೆ ಕುರಿತು ಮಾ.15ರೊಳಗೆ ಸರ್ವ ಪಕ್ಷ ಸಭೆ ಕರೆದು ನಿರ್ಧಾರ ಕೈಗೊಳ್ಳುವುದಾಗಿ ಮೈಸೂರಿನ ಪಿರಿಯಾಪಟ್ಟಣದಲ್ಲಿ ನಿಯೋಗಕ್ಕೆ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತು ಉಳಿಸಿಕೊಳ್ಳದೆ ತೀವ್ರ ನಿರಾಸೆ ಉಂಟುಮಾಡಿದ್ದಾರೆ. ಎಐಸಿಸಿ ಕಾರ್ಯದರ್ಶಿ ಸತೀಶ್‌ ಜಾರಕಿಹೊಳಿ ಮತ್ತು ಸಂಸದ ಪ್ರಕಾಶ ಹುಕ್ಕೇರಿ ಸಿಎಂ ಮನವೊಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಮುಖಂಡ ಬಿ.ಆರ್‌.ಸಂಗಪ್ಪಗೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vijaya Karnataka Web failure to persuade cm sangappagol sparks
ಸಿಎಂ ಮನವೊಲಿಸಲು ವಿಫಲ: ಸಂಗಪ್ಪಗೋಳ ಕಿಡಿ


ಸ್ಥಳೀಯ ಮಿನಿ ವಿಧಾನಸೌಧದ ಎದುರು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹದ 39ನೇ ದಿನವಾದ ಗುರುವಾರ ಮಾತನಾಡಿದ ಅವರು, ಇಂತಹ ನಾಯಕರು ಇರುವಾಗ ಚಿಕ್ಕೋಡಿ ಜಿಲ್ಲೆ ಘೋಷಣೆ ಕಷ್ಟಸಾಧ್ಯ. ರಾಜ್ಯ ಸರಕಾರದ ಕಣ್ಣು ತೆರೆಸಲು ಜಿಲ್ಲಾ ಹೋರಾಟ ಸಮಿತಿ ಉಗ್ರ ಹೋರಾಟ ಮಾಡಲು ಮುಂದಾಗುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಬಸವ ಸೇನೆಯ ಸುಮಾರು ನೂರಕ್ಕೂ ಹೆಚ್ಚಿನ ಕಾರ್ಯಕರ್ತರು ಜಿಲ್ಲಾ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ