ಆ್ಯಪ್ನಗರ

ಕೌಟುಂಬಿಕ ಸಮಸ್ಯೆ: ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಅಥಣಿ: ಕೌಟುಂಬಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ವಿಫಲ ಯತ್ನ ಮಾಡಿರುವ ಘಟನೆ ಗುರುವಾರ ...

Vijaya Karnataka 2 Nov 2018, 5:00 am
ಅಥಣಿ : ಕೌಟುಂಬಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ವಿಫಲ ಯತ್ನ ಮಾಡಿರುವ ಘಟನೆ ಗುರುವಾರ ನಡೆದಿದೆ.
Vijaya Karnataka Web BLG-0111-2-52-1ATHANI 12


ರವೀಂದ್ರ ಎಂಬ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದವ. ಈತ ವಿನೋಚನಾ ಶಾಲೆಯಲ್ಲಿ 10ನೇ ತರಗತಿ ಕಲಿಯುತ್ತಿದ್ದು ತನ್ನ ಕುಟುಂಬದ ಪರಿಸ್ಥಿತಿ ಹಾಗೂ ಸಮಸ್ಯೆಯಿಂದ ಬೇಸತ್ತು ಡೆತ್‌ ನೋಟ್‌ ಬರೆದಿಟ್ಟಿದ್ದಾನೆ. ನಂತರ ಬಾತ್‌ರೂಂಗೆ ಹೋಗಿ ಬ್ಲೇಡ್‌ನಿಂದ ಕತ್ತು ಕೊಯ್ದುಕೊಳ್ಳಲು ಯತ್ನಿಸಿದ್ದಾನೆ.

ಪದೇ ಪದೇ ಮನೆಗೆ ಬಾರದೆ ಹಾಸ್ಟೆಲ್‌ನಲ್ಲೇ ಇದ್ದು ಕಲಿಯುವಂತೆ ಬುದ್ಧಿಮಾತು ಹೇಳಿದ್ದಕ್ಕೆ ಈ ಕೃತ್ಯವೆಸಗಿದ್ದಾಗಿ ವಿದ್ಯಾರ್ಥಿಯ ಪಾಲಕರು ಹೇಳಿಕೊಂಡಿದ್ದಾರೆ.

ರವೀಂದ್ರನನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಪ್ರಾಣಾಪಾಯದ ಭೀತಿ ಇಲ್ಲ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ಅಥಣಿ ಪಿಎಸ್‌ಐ ಎನ್‌.ಎಸ್‌. ಅವಟಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ