ಆ್ಯಪ್ನಗರ

ವಿಷ ಸೇವಿಸಿ ರೈತ ಆತ್ಮಹತ್ಯೆ

ನೇಸರಗಿ: ಸಾಲ ಪಾವತಿಸಲು ಸಾಧ್ಯವಾಗದೇ ರೈತನೋರ್ವ ಸಮೀಪದ ಹೊಸಕೋಟಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

Vijaya Karnataka 15 Oct 2018, 5:00 am
ನೇಸರಗಿ: ಸಾಲ ಪಾವತಿಸಲು ಸಾಧ್ಯವಾಗದೇ ರೈತನೋರ್ವ ಸಮೀಪದ ಹೊಸಕೋಟಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web BEL-14NSG1


ನಾಗರಾಜ ಪ್ರಕಾಶ ಉಣಕಲ್ಲ (28 ) ಆತ್ಮಹತ್ಯೆ ಮಾಡಿಕೊಂಡವರು. ಇವರು ಹೊಲದಲ್ಲಿ ಮೂರು ಕೊಳವೆ ಬಾವಿ ಹಾಕಿಸಿದ್ದರು. ಆದರೆ ನೀರು ಬಾರದಿರುವುದು ಆತ್ಮಹತ್ಯೆಗೆ ಕಾರಣವೆನ್ನಲಾಗಿದೆ. ಕರ್ನಾಟಕ ವಿಕಾಸ ಬ್ಯಾಂಕಿನಲ್ಲಿ ಸುಮಾರು 60 ಸಾವಿರ ರೂ., ಇತರ ಖಾಸಗಿ ಹಣಕಾಸು ಸಂಸ್ಥೆ ಹಾಗೂ ಇತರರಿಂದ ಪಡೆದ ಕೈಗಡ ಸೇರಿದಂತೆ ಸುಮಾರು 2 ಲಕ್ಷ ರೂ. ಸಾಲ ಮಾಡಿದ್ದರೆನ್ನಲಾಗಿದೆ.

ಅ. 12ರಂದು ತಮ್ಮ ಹೊಲದಲ್ಲಿ ವಿಷ ಸೇವಿಸಿದ್ದರು. ತಕ್ಷಣ ನೇಸರಗಿ ಸರಕಾರಿ ಆಸ್ಪತ್ರೆ ಹಾಗೂ ನಂತರ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಭಾನುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನೇಸರಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ತಂದೆ, ತಾಯಿ, ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ