ಆ್ಯಪ್ನಗರ

ವಿದ್ಯುದಾಘಾತ: ಬಾವಿಗೆ ಬಿದ್ದು ರೈತ ಸಾವು

ಸಮೀಪದ ಹೊಸಕೋಟಿ ಗ್ರಾಮದ ಜಮೀನಿನಲ್ಲಿ ಪಂಪ್‌ಸೆಟ್‌ ಚಾಲನೆ ಮಾಡಲು ಹೋದ ರೈತರೊಬ್ಬರು ವಿದ್ಯುದಾಘಾತಕ್ಕೆ ಗುರಿಯಾಗಿ ಅಲ್ಲಿಯೇ ಇದ್ದ ಬಾವಿಗೆ ಬಿದ್ದು ಶನಿವಾರ ಮೃತಪಟ್ಟಿದ್ದಾರೆ...

Vijaya Karnataka 17 Jun 2018, 5:00 am
ನೇಸರಗಿ: ಸಮೀಪದ ಹೊಸಕೋಟಿ ಗ್ರಾಮದ ಜಮೀನಿನಲ್ಲಿ ಪಂಪ್‌ಸೆಟ್‌ ಚಾಲನೆ ಮಾಡಲು ಹೋದ ರೈತರೊಬ್ಬರು ವಿದ್ಯುದಾಘಾತಕ್ಕೆ ಗುರಿಯಾಗಿ ಅಲ್ಲಿಯೇ ಇದ್ದ ಬಾವಿಗೆ ಬಿದ್ದು ಶನಿವಾರ ಮೃತಪಟ್ಟಿದ್ದಾರೆ.
Vijaya Karnataka Web farmer dies falling in to the well due to electrocution
ವಿದ್ಯುದಾಘಾತ: ಬಾವಿಗೆ ಬಿದ್ದು ರೈತ ಸಾವು

ಮೃತರನ್ನು ಗ್ರಾಮದ ಹಣಮಂತ ಸದೆಪ್ಪ ಮಿಜ್ಜಿ (29) ಎಂದು ಗುರುತಿಸಲಾಗಿದೆ. ಬಾವಿಗೆ ಬಿದ್ದ ರೈತನ ಶವವನ್ನು ಮೇಲೆತ್ತಲು ಗ್ರಾಮಸ್ಥರಿಗೆ ಸಾಧ್ಯವಾಗದ್ದರಿಂದಬೈಲಹೊಂಗಲ ಅಗ್ನಿಶಾಮಕ ದಳದ ಸಿಬ್ಬಂದಿ ಒಂದು ತಾಸಿಗೂ ಹೆಚ್ಚು ಕಾಲ ಶೋಧ ನಡೆಸಿ ಶವವನ್ನು ಹೊರತೆಗೆದಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಮತ್ತು ತಂದೆ-ತಾಯಿಯನ್ನು ಅಗಲಿದ್ದಾರೆ. ಘಟನೆ ಕುರಿತು ನೇಸರಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ