ಆ್ಯಪ್ನಗರ

ಸಾಲ ಬಾಧೆ: ರೈತ ಆತ್ಮಹತ್ಯೆ

ಸಾಲ ಬಾಧೆ ತಾಳದೆ ಗ್ರಾಮದ ರೈತ ಬಸಪ್ಪ ರುದ್ರಪ್ಪ ಸಂಗೊಳ್ಳಿ (54) ಎಂಬುವರು ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

Vijaya Karnataka 7 Mar 2018, 5:00 am

ಹೊಸೂರ: ಸಾಲ ಬಾಧೆ ತಾಳದೆ ಗ್ರಾಮದ ರೈತ ಬಸಪ್ಪ ರುದ್ರಪ್ಪ ಸಂಗೊಳ್ಳಿ (54) ಎಂಬುವರು ವಿಷದ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka Web farmer suicide
ಸಾಲ ಬಾಧೆ: ರೈತ ಆತ್ಮಹತ್ಯೆ


ನುಸಿಗಳಿಗೆ ಹಾಕುವ ವಿಷ ಮಾತ್ರೆ ನುಂಗಿ ಅಸ್ವಸ್ಥರಾಗಿದ್ದ ಬಸಪ್ಪ ಅವರನ್ನು ಕೂಡಲೇ ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮೃತ ರೈತ ಗ್ರಾಮದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನಲ್ಲಿ ಸುಮಾರು 2.6 ಲಕ್ಷ ರೂ. ಸಾಲ ಮಾಡಿದ್ದರು. ಬ್ಯಾಂಕಿನಿಂದ ಸಾಲದ ನೋಟಿಸ್‌ ಬಂದಿತ್ತು. ಅಲ್ಲದೆ ಕಳೆದ ನಾಲ್ಕು ವರ್ಷದಿಂದ ಜಮೀನಿನಲ್ಲಿಯ ಬೆಳೆ ಹಾಳಾಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಕುರಿತು ಮುರಗೋಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ