ಆ್ಯಪ್ನಗರ

ಸಾಲ ಮನ್ನಾಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

ವಿಕ ಸುದ್ದಿಲೋಕ ಯರಗಟ್ಟಿ ಮುಖ್ಯಮಂತ್ರಿ ಎಚ್‌ಡಿ...

Vijaya Karnataka 26 May 2018, 5:00 am
ಯರಗಟ್ಟಿ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದ 24 ಗಂಟೆಯೊಳಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ತಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ ಹೇಳಿದ್ದರು. ಆದರೆ ಇನ್ನೂ ಈ ಕುರಿತು ಯಾವುದೇ ದೃಢ ನಿರ್ಧಾರ ಕೈಗೊಂಡಿಲ್ಲ. ಇದು ರೈತ ವಿರೋಧಿ ನೀತಿಯಾಗಿದ್ದು ರೈತರ ಆತ್ಮಹತ್ಯೆಗೆ ಕುಮಾರಸ್ವಾಮಿ ಅವರೇ ನೇರ ಹೊಣೆಯಾಗುತ್ತಾರೆ ಎಂದು ರೈತ ಸೇನಾ ಜಿಲ್ಲಾಧ್ಯಕ್ಷ ಸೋಮು ರೈನಾಪೂರ, ಸಿಎಂ ವಿರುದ್ಧ ಗುಡುಗಿದರು.
Vijaya Karnataka Web BEL-25YGTPHOTO1


ಕಳಸಾ -ಬಂಡೂರಿ ಯೋಜನೆ ಜಾರಿ, ರೈತರ ಸಾಲ ಮನ್ನಾ, ಕಬ್ಬಿನ ಬಾಕಿ ಬಿಲ್‌ ಪಾವತಿ ಹಾಗೂ ಉಚಿತ ಬೀಜ ಗೊಬ್ಬರ ಪೂರೈಕೆಗೆ ಆಗ್ರಹಿಸಿ ರಾಮದುರ್ಗ ಹಾಗೂ ಸವದತ್ತಿ ತಾಲೂಕು ರೈತ ಸೇನಾ ಸಂಘಟನೆಯ ಕಾರ್ಯಕರ್ತರು ಇಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಅವರು ಮಾತನಾಡಿದರು. ಉತ್ತರ ಕರ್ನಾಟಕದ ರೈತರನ್ನು ಕಡೆಗಣಿಸಿದರೆ ಮುಂಬರುವ ದಿನಗಳಲ್ಲಿ ರೈತಸೇನಾ ಕರ್ನಾಟಕ ಹಾಗೂ ವಿವಿಧ ರೈತಪರ ಸಂಘಟನೆಗಳಿಂದ ತೀವ್ರ ಸ್ವರೂಪದ ಹೋರಾಟ ಕೈಗೊಂಡು ವಿಧಾನಸೌಧ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿ ಧರಣಿ ಕೈಗೊಳ್ಳಲಾಗುವುದು ಎಂದರು.

ಧರಣಿ ನಂತರ ಪ್ರತಿಭಟನಾಕಾರರು ಉಪ ತಹಸೀಲ್ದಾರ ಎಸ್‌.ಎ. ಬಬಲಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ರೈತ ಸೇನಾ ರಾಮದುರ್ಗ ತಾಲೂಕಾಧ್ಯಕ್ಷ ಗಿರೆಪ್ಪ ಹಂಜಿ, ಸವದತ್ತಿ ತಾಲೂಕಾಧ್ಯಕ್ಷ ಪಂಚಪ್ಪ ಹಣಶಿ, ಉಪಾಧ್ಯಕ್ಷ ಮಾಯಪ್ಪ ವಡೇಕನ್ನವರ, ಸಂಜು ಸಿದ್ನಾಳ, ಗೂಳಪ್ಪಾ ಬಾವಿಕಟ್ಟಿ, ದ್ಯಾಮಣ್ಣ ಖಂಡ್ರಿ ಮುಂತಾದವರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ