ಆ್ಯಪ್ನಗರ

ಬೆಳಗಾವಿಯಲ್ಲಿ ಸಚಿವ ಶಿವರಾಮ ಹೆಬ್ಬಾರ್‌ ಕಾರಿಗೆ ರೈತರ ಮುತ್ತಿಗೆ; ಸಕ್ಕರೆ ಆಯುಕ್ತರ ಕಚೇರಿ ಸ್ಥಳಾಂತರ ನಿರ್ಧಾರಕ್ಕೆ ಆಕ್ರೋಶ

ಬೆಳಗಾವಿ: ಕಬ್ಬು ಬೆಳೆಗಾರರ ...

Vijaya Karnataka 23 Jun 2020, 5:00 am
ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವಂತೆ ಆಗ್ರಹಿಸಿ ಸಕ್ಕರೆ ಸಚಿವ ಶಿವರಾಮ ಹೆಬ್ಬಾರ ಅವರ ಕಾರಿಗೆ ರೈತ ಮುಖಂಡರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
Vijaya Karnataka Web 22LBS7_53
ಸಕ್ಕರೆ ಮತ್ತು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ ಅವರ ಕಾರಿಗೆ ಮುತ್ತಿಗೆ ಹಾಕಿದ ರೈತ ಮುಖಂಡರು.


ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಸಚಿವರ ಕಾರಿಗೆ ಮುತ್ತಿಗೆ ಹಾಕಿದ ರೈತರು ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಬೆಳಗಾವಿಯಲ್ಲಿಸಕ್ಕರೆ ಆಯುಕ್ತ ಕಚೇರಿ ಆರಂಭವಾದ ಮೂರು ತಿಂಗಳಲ್ಲೇ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗುತ್ತಿದೆ. ಕಚೇರಿ ಸ್ಥಳಾಂತರ ಮಾಡುವಂತೆ ಸಕ್ಕರೆ ಸಚಿವರಾಗಿ ನೀವೇ ಪತ್ರ ಬರೆದಿದ್ದೀರಿ. ಸಕ್ಕರೆ ಆಯುಕ್ತರ ಕಚೇರಿಯಲ್ಲಿಜಿಲ್ಲೆಯ ಸಾವಿರಾರು ಪ್ರಕರಣಗಳು ಬಾಕಿ ಇವೆ. ಕಚೇರಿ ಸ್ಥಳಾಂತರವಾದರೆ ರೈತರು ಬೆಂಗಳೂರಿಗೆ ಓಡಾಡುವ ಸ್ಥಿತಿ ನಿರ್ಮಾಣವಾಗುತ್ತದೆ. ಹೀಗಾಗಿ ತಕ್ಷಣ ಆದೇಶ ವಾಪಸ್‌ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಯಿಸಿದ ಸಚಿವ ಶಿವರಾಮ ಹೆಬ್ಬಾರ್‌, '' ಸರಕಾರಿ ಕಚೇರಿಗಳ ವಿಲೀನಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್‌.ಅಶೋಕ ನೇತೃತ್ವದಲ್ಲಿಉಪಸಮಿತಿ ರಚಿಸಲಾಗಿದೆ. ಸಮಿತಿ ನಿರ್ಣಯದ ಆಧಾರದಲ್ಲಿಮುಂದಿನ ಕ್ರಮಕೈಗೊಳ್ಳಲಾಗುವುದು. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಅವಕಾಶ ನೀಡುವುದಿಲ್ಲ. ಸಕ್ಕರೆ ಆಯುಕ್ತರ ಕಚೇರಿ ಎಲ್ಲಿದ್ದರೂ ಬಾಕಿ ಹಣವನ್ನು ಕಾರ್ಖಾನೆಗಳು ರೈತರಿಗೆ ಪಾವತಿಸಬೇಕು. ಬಾಕಿ ಉಳಿದಿರುವ ಪ್ರಕರಣಗಳ ಕುರಿತು ಪರಿಶೀಲನೆಗೆ ಒಂದು ದಿನಾಂಕ ನಿಗದಿ ಮಾಡಿ ಆಯುಕ್ತರನ್ನು ಬೆಳಗಾವಿಗೆ ಕಳುಹಿಸಿಕೊಡಲಾಗುವುದು'' ಎಂದು ಭರವಸೆ ನೀಡಿದರು.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ರೈತರು, ''ಸಕ್ಕರೆ ಸಚಿವರಾಗಿರುವ ನೀವು ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು. ಸ್ಥಳಾಂತರಕ್ಕೆ ನೀವೇ ಪತ್ರ ಬರೆದು ಈಗ ಸಮಿತಿ ನಿರ್ಣಯದಂತೆ ಕ್ರಮಕೈಗೊಳ್ಳುವುದಾಗಿ ಹೇಳುತ್ತಿದ್ದೀರಿ. ಹೀಗಾಗಿ ಆದೇಶ ವಾಪಸ್‌ ಪಡೆಯಬೇಕು'' ಎಂದು ಒತ್ತಾಯಿಸಿ ಸರಕಾರ ಹಾಗೂ ಸಚಿವ ವಿರುದ್ಧ ಘೋಷಣೆ ಕೂಗಿದರು.

ರೈತ ಮುಖಂಡರಾದ ಸಿದ್ಧಗೌಡ ಮೋದಗಿ, ಚೂನಪ್ಪ ಪೂಜಾರಿ ಸೇರಿದಂತೆ ಹಲವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ