ಆ್ಯಪ್ನಗರ

ಬೇಡಿಕೆ ಈಡೇರಿಕೆಗೆ ರೈತರ ಮನವಿ

ಬೈಲಹೊಂಗಲ : ರೈತರ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಉಪವಿಭಾಗಾಧಿಕಾರಿಗೆ ಮನವಿ ...

Vijaya Karnataka 18 Jun 2019, 5:00 am
ಬೈಲಹೊಂಗಲ : ರೈತರ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
Vijaya Karnataka Web BEL-17HTP7


2016-17ನೇ ಸಾಲಿನ ಬೆಳೆ ಹಣವನ್ನು ರೈತರ ಖಾತೆಗೆ ಕೃಷಿ ಇಲಾಖೆ ಜಮೆ ಮಾಡಬೇಕು. ತಾಲೂಕಿನಲ್ಲಿ ಮುಂಗಾರು ಮಳೆ ಬರದೆ ಇರುವುದರಿಂದ ಬರ ಕಾಮಗಾರಿ ಜಾರಿ ಮಾಡಬೇಕು. ಮಹದಾಯಿ ನದಿ ಜೋಡಣೆ ವಿಚಾರವಾಗಿ ಕೋರ್ಟಿನಲ್ಲಿ ತೀರ್ಪು ಬಂದಿದ್ದು, ತಕ್ಷ ಣ ರಾಜ್ಯ, ಕೇಂದ್ರ ಸರಕಾರಗಳು ಯೋಜನೆಯನ್ನು ಕಾರ್ಯರೂಪಕ್ಕೆ ತರಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ. ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುತ್ತಿದ್ದು, ಇಲ್ಲಿಯ ಬಾವಿಗಳನ್ನು ಸ್ವಚ್ಛಗೊಳಿಸಿ ನೀರಿನ ಅಭಾವ ಕಡಿಮೆ ಮಾಡಬೇಕೆಂದೂ ಆಗ್ರಹಿಸಲಾಗಿದೆ.

ಜಿಲ್ಲಾ ಕಾರ್ಯಾಧ್ಯಕ್ಷ ರವಿ ಸಿದ್ದಮ್ಮನ್ನವರ, ಜಿಲ್ಲಾಧ್ಯಕ್ಷ ಸತ್ಯಪ್ಪ ಮಲ್ಲಾಪೂರೆ, ಹಸಿರು ಸೇನೆ ಅಧ್ಯಕ್ಷ ಮಂಜು ಪೂಜೇರಿ, ಜಿಲ್ಲಾ ಉಪಾಧ್ಯಕ್ಷ ಗುರು ಸೋಮನ್ನವರ, ಮಹಾಂತೇಶ ಹಿರೇಮಠ, ರೈತ ಮಹಿಳೆಯರು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ