ಆ್ಯಪ್ನಗರ

ಹಕ್ಕು ಪತ್ರ ನೀಡಲು ರೈತರ ಒತ್ತಾಯ

ಬೆಳಗಾವಿ: ಕಿತ್ತೂರು ತಾಲೂಕಿನ ಕುಲವಳ್ಳಿ ಗ್ರಾಮದ ಸರಕಾರಿ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಮಂಗಳವಾರ ಕರ್ನಾಟಕ ಪ್ರಾಂತ ರೈತ ಸಂಘದ ...

Vijaya Karnataka 19 Dec 2018, 5:00 am
ಬೆಳಗಾವಿ : ಕಿತ್ತೂರು ತಾಲೂಕಿನ ಕುಲವಳ್ಳಿ ಗ್ರಾಮದ ಸರಕಾರಿ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಮಂಗಳವಾರ ಕರ್ನಾಟಕ ಪ್ರಾಂತ ರೈತ ಸಂಘದ ಕುಲವಳ್ಳಿ ಗ್ರಾಮ ಘಟಕದ ವತಿಯಿಂದ ಸುವರ್ಣ ವಿಧಾನಸೌಧದ ಸಮೀಪ ಪ್ರತಿಭಟನೆ ನಡೆಸಲಾಯಿತು.
Vijaya Karnataka Web BEL-18 LBS 11


50 ವರ್ಷಗಳಿಂದ ಕುಲವಳ್ಳಿ ಗ್ರಾಮದಲ್ಲಿ ಸರಕಾರಿ ಜಮೀನು ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತಿದ್ದೇವೆ. ಆದರೆ, ಅಧಿಕಾರಿಗಳು ಕೆಲ ಸಂಘಟನೆ ಹಾಗೂ ಬೇರೆಯವರ ಹೆಸರಿಗೆ ಭೂಮಿ ಮಂಜೂರು ಮಾಡಿದ್ದಾರೆ. ಈ ಕುರಿತು ಹಿಂದಿನ ಕಾಂಗ್ರೆಸ್‌ ಸರಕಾರದ ಕಂದಾಯ ಸಚಿವ ಕಾಂಗೋಡು ತಿಮ್ಮಪ್ಪ ಅವರ ಗಮನಕ್ಕೆ ತರಲಾಗಿತ್ತು. ಕಾಗೋಡು ತಿಮ್ಮಪ್ಪ ಅವರು ಸರ್ವೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆದರೆ, ಅಧಿಕಾರಿಗಳು ಇನ್ನೂವರೆಗೂ ಸರ್ವೆ ಕಾರ್ಯ ಪೂರ್ಣಗೊಳಿಸಿ ಬೇನಾಮಿ ಹೆಸರು ರದ್ದಪಡಿಸಲು ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 50 ವರ್ಷದಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರಿಗೆ ಭೂಮಿ ನೀಡಬೇಕು. ಸಾಗುವಳಿದಾರರ ಹೆಸರಲ್ಲಿ ಹಕ್ಕು ಪತ್ರ ನೀಡಬೇಕು ಎಂದು ಮನವಿ ಮಾಡಿದರು.

ರೈತರಾದ ನಾಗಪ್ಪ ಅಸಲನ್ನವರ, ಶಿವಮೂರ್ತಿ ಜಿಂದ್ರಾಳಿ, ಎಲ್‌.ಎಸ್‌.ನಾಯಕ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ