ಆ್ಯಪ್ನಗರ

ತುರ್ತು ಪರಿಸ್ಥಿತಿ ಹೋರಾಟಗಾರರಿಗೆ ಸನ್ಮಾನ

ಬೆಳಗಾವಿ: ದೇಶದಲ್ಲಿ ...

Vijaya Karnataka 27 Jun 2018, 5:00 am
ಬೆಳಗಾವಿ:ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಸಂದರ್ಭದಲ್ಲಿ ಜೈಲಿಗೆ ಹೋಗಿದ್ದ ಬೆಳಗಾವಿಯ ಹೋರಾಟಗಾರರನ್ನು ಜುಲೈ ಮೊದಲ ವಾರದಲ್ಲಿ ಸನ್ಮಾನಿಸಲಾಗುವುದು ಎಂದು ಸಂಸದ ಸುರೇಶ ಅಂಗಡಿ ತಿಳಿಸಿದರು.
Vijaya Karnataka Web BLG-2606-2-52-26PRAMOD2


ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1975 ಜೂನ್‌ 26ರಂದು ಅಂದಿನ ಪ್ರಧಾನಿ ಇಂದಿರಾಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದ ಆ ದಿನದ ಬಗ್ಗೆ ಇಂದಿನ ಯುವಕರಿಗೆ ತಿಳಿಸುವ ಸಲುವಾಗಿ ಬಿಜೆಪಿಯಿಂದ ಜೂ.26ರಂದು ಕರಾಳ ದಿನ ಆಚರಿಸಲಾಗುತ್ತಿದೆ ಎಂದರು.

ಅಂದು ಸಂವಿಧಾನ ಮೀರಿ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್‌ ಇಂದು ಬಿಜೆಪಿಗೆ ಪಾಠ ಹೇಳುತ್ತಿದೆ. ಆ ಪಕ್ಷದಲ್ಲಿ ನೆಹರು, ಗಾಂಧಿ ಕುಟುಂಬದವರನ್ನು ಬಿಟ್ಟರೆ ಬೇರೆ ಯಾರಿಗೂ ಅಧ್ಯಕ್ಷ ಹುದ್ದೆ ಸಿಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಭಾವಕ್ಕೆ ಅಂಜಿ ಜೆಡಿಎಸ್‌- ಕಾಂಗ್ರೆಸ್‌ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದೆ. ಒಂದು ದೇವೇಗೌಡರ ಪರಿವಾರ, ಇನ್ನೊಂದು ನೆಹರು ಪರಿವಾರ ಎಂದು ಟೀಕಿಸಿದರು.

ಹಜ್‌ ಭವನ ನಿರ್ಮಾಣಕ್ಕೆ ಬಿಜೆಪಿ ಹಣ ಕೊಟ್ಟಿದೆ. ಆ ಭವನಕ್ಕೆ ಟಿಪ್ಪು ಸುಲ್ತಾನ್‌ ಹೆಸರಿಡುವ ಬದಲು ಅಬ್ದುಲ್‌ ಕಲಾಂ ಅವರಂಥವರ ಹೆಸರಿಡಬೇಕು. ಆದರೆ, ಕಾಂಗ್ರೆಸ್‌ಗೆ ಹಿಂದೂಗಳ ಸಂಹಾರ ಮಾಡುವುದೇ ಉದ್ದೇಶವಾಗಿದೆ ಎಂದು ಸಂಸದರು ಹೇಳಿದರು.

ಲಿಂಗಾಯತ ಸಮುದಾಯದ ಶಾಸಕರ ಸನ್ಮಾನ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕರು ಗೈರಾದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಸಂಸದ ಸುರೇಶ ಅಂಗಡಿ, 'ಅದರ ಬಗ್ಗೆ ಮಾತನಾಡುವಷ್ಟು ದೊಡ್ಡ ತಜ್ಞ ನಾನಲ್ಲ. ಅದೆಲ್ಲ ವೀರಶೈವ ಮಹಾಸಭೆ ಹೇಳತ್ತೆ. ನಾನು ಹೇಳೋದು ಸರಿಯಲ್ಲ' ಎಂದರು.

ಬಿಜೆಪಿ ಯುವಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ರಾಜು ಚಿಕ್ಕನಗೌಡರ್‌, ನಗರ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ, ಕಾರ್ಯದರ್ಶಿ ಶಶಿಕಾಂತ ಪಾಟೀಲ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ