ಆ್ಯಪ್ನಗರ

ಹೋರಾಟ ತಾತ್ಕಾಲಿಕ ಹಿಂದಕ್ಕೆ; ಮುಂದುವರಿದ ಧರಣಿ

ಬೆಳಗಾವಿ: ಕಬ್ಬಿನ ದರ ವಿಷಯವಾಗಿ ...

Vijaya Karnataka 10 Dec 2018, 5:00 am
ಬೆಳಗಾವಿ : ಕಬ್ಬಿನ ದರ ವಿಷಯವಾಗಿ ರೈತ ಪರ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿ ಬಳಿ ಹಮ್ಮಿಕೊಂಡಿದ್ದ ಅಹೋರಾತ್ರಿ ಧರಣಿ ಭಾನುವಾರ ಎರಡನೇ ದಿನದಲ್ಲಿ ಮುಂದುವರಿದಿದೆ. ಈ ನಡುವೆ ಸೋಮವಾರ ನಡೆಸಲು ನಿರ್ಧರಿಸಿದ್ದ ಹೋರಾಟವನ್ನು ಸಿಎಂ ಭರವಸೆ ಹಿನ್ನೆಲೆಯಲ್ಲಿ ರೈತರು ತಾತ್ಕಾಲಿಕವಾಗಿ ಕೈ ಬಿಟಿದ್ದಾರೆ.
Vijaya Karnataka Web BLG-0912-2-52-9PRAMOD2


ಕಬ್ಬು ಬಿಲ್‌ ಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಪರ ಸಂಘಟನೆಗಳು ಶನಿವಾರದಿಂದಲೇ ಧರಣಿ ಆರಂಭಿಸಿದ್ದವು. ಭಾನುವಾರ ಮಧ್ಯಾಹ್ನ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ಸಂಘದ ರಾಜ್ಯ ಘಟಕದ ಅಧ್ಯಕ್ಷ ಕುರಬೂರು ಶಾಂತಕುಮಾರ ನೇತೃತ್ವದಲ್ಲಿ ಪ್ರತಿಭಟನೆ ಮುಂದುವರಿಸಿದರು. ಸೋಮವಾರದಿಂದ ಆರಂಭವಾಗುವ ಅಧಿವೇಶನಕ್ಕೆ ಬಿಸಿ ಮುಟ್ಟಿಸುವ ನಿಟ್ಟಿನಲ್ಲಿ ಹೋರಾಟಕ್ಕೆ ತಯಾರಿ ನಡೆಸಿದ್ದರು.

''ಭಾನುವಾರ ಸಂಜೆ ನಮ್ಮನ್ನು ಸಂಪರ್ಕಿಸಿದ ಜಿಲ್ಲಾಧಿಕಾರಿ ಎಸ್‌.ಬಿ. ಬೊಮ್ಮನಹಳ್ಳಿ, ಸೋಮವಾರ ಕಬ್ಬು ಬೆಳೆಗಾರರ ಮುಖಂಡರೊಂದಿಗೆ ಸಿಎಂ ಸಭೆ ನಡೆಸುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೋರಾಟದ ನಿರ್ಧಾರ ಕೈ ಬಿಟ್ಟಿದ್ದೇವೆ. ಆದರೆ, ಡಿಸಿ ಕಚೇರಿ ಬಳಿ ಅಹೋರಾತ್ರಿ ಧರಣಿ ಮುಂದುವರಿಯಲಿದೆ. ಸಿಎಂ ಸಭೆ ಬಳಿಕ ಮುಂದಿನ ನಿರ್ಧಾರ ಮಾಡುತ್ತೇವೆ'' ಎಂದು ಕುರಬೂರು ಶಾಂತಕುಮಾರ 'ವಿಕ'ಕ್ಕೆ ತಿಳಿಸಿದ್ದಾರೆ.

ಕಳೆದ ತಿಂಗಳು ರೈತ ಸಂಘ, ಭಾರತೀಯ ಕೃಷಿಕ ಸಮಾಜದ ಕಾರ್ಯಕರ್ತರು ಸುವರ್ಣ ವಿಧಾನಸೌಧಕ್ಕೆ ಕಬ್ಬಿನ ಲಾರಿ ನುಗ್ಗಿಸಿದ್ದರು. ಅದಾದ ಬಳಿಕ ಸಿಎಂ ಸಭೆ ನಡೆಸಿದ್ದರು. ಆದರೆ, ರೈತರ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ಅತೃಪ್ತರಾಗದ ಹೋರಾಟಗಾರರು ಶನಿವಾರದಿಂದ ಡಿಸಿ ಕಚೇರಿ ಬಳಿ ಪ್ರತಿಭಟನೆ ಆರಂಭಿಸಿದ್ದಾರೆ. ಕಬ್ಬು ಬೆಳೆಗಾರರ ಸಂಘದ ಗದಗ, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಮೈಸೂರು, ಚಾಮರಾಜನಗರದ ಪದಾಧಿಕಾರಿಗಳು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.

ಕಬ್ಬು ಬೆಳೆಗಾರರ ಪರ ಬಿಜೆಪಿ ನಡೆಸುತ್ತಿರುವ ಹೋರಾಟದಲ್ಲಿ ರೈತರ ಕಾಳಜಿ ಇಲ್ಲ. ಕಬ್ಬಿನ ಎಫ್‌ಆರ್‌ಪಿ 9.5 ದಿಂದ 10 ಕ್ಕೆ ಏರಿಸಿ ಕೇಂದ್ರ ಸರಕಾರ ಅನ್ಯಾಯ ಮಾಡಿದೆ. ಅಂಥವರು (ಬಿಜೆಪಿ) ಹೋರಾಟ ಮಾಡುತ್ತಿರುವುದು ವಿಚಿತ್ರ. ಸಿಎಂ ಕುಮಾರಸ್ವಾಮಿ ಕೂಡ ಕಬ್ಬು ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ.
- ಕುರಬೂರು ಶಾಂತಕುಮಾರ, ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಅಧ್ಯಕ್ಷ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ