ಆ್ಯಪ್ನಗರ

ಪ್ರೌಢ ಶಾಲೆ ಕೊಠಡಿಗೆ ಬೆಂಕಿ

ಚನ್ನಮ್ಮನ ಕಿತ್ತೂರು: ತಾಲೂಕಿನ ತಿಗಡೊಳ್ಳಿ ಗ್ರಾಮದ ಭರತೇಶ ಪ್ರೌಢ ಶಾಲೆಯ ಕೊಠಡಿಯಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದಲ್ಲಿ ಗ್ರಂಥಾಲಯದ ...

Vijaya Karnataka 18 Mar 2019, 5:00 am
ಕಿತ್ತೂರು : ತಾಲೂಕಿನ ತಿಗಡೊಳ್ಳಿ ಗ್ರಾಮದ ಭರತೇಶ ಪ್ರೌಢ ಶಾಲೆಯ ಕೊಠಡಿಯಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದಲ್ಲಿ ಗ್ರಂಥಾಲಯದ ಪುಸ್ತಕಗಳು, ವಿಜ್ಞಾನ ಪಠ್ಯ ಬೋಧನೆಗೆ ಸಂಬಂಧಿಸಿದ ವಸ್ತುಗಳು ಸುಟ್ಟು ಕರಕಲಾಗಿವೆ.
Vijaya Karnataka Web BEL-17KITTUR PHOTO 2


ಶನಿವಾರ ತಡರಾತ್ರಿ ಪ್ರೌಢ ಶಾಲೆಯ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೊಠಡಿಯಲ್ಲಿದ್ದ ಗ್ರಂಥಾಲಯದ ಪುಸ್ತಕಗಳು, ವಿಜ್ಞಾನ ಪಠ್ಯ ಬೋಧನೆಗೆ ಸಂಬಂಧಿಸಿದ ವಸ್ತುಗಳು, ಕ್ರೀಡಾ ಸಾಮಗ್ರಿಗಳು, ಶಾಲೆಯ ಕೆಲವು ದಾಖಲಾತಿಗಳು ಭಸ್ಮವಾಗಿವೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಶಾಲಾ ಶಿಕ್ಷ ಕರು, ಗ್ರಾಮಸ್ಥರು ಬೆಂಕಿಯನ್ನು ನಂದಿಸಿದ್ದಾರೆ. ಇಲ್ಲದಿದ್ದರೆ ಶಾಲೆಯ ಎಲ್ಲ ಕೊಠಡಿಗಳಿಗೆ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆ ಇತ್ತು. ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ