ಆ್ಯಪ್ನಗರ

ಗೋಕಾಕ: ಪ್ರವಾಹದಲ್ಲಿ ಇಳಿಮುಖ

ಗೋಕಾಕ: ಕಳೆದ ಒಂದು ವಾರದಿಂದ ನಗರ ಹಾಗೂ ಸುತ್ತಮುತ್ತಲಿನ ಜನತೆಯನ್ನು ...

Vijaya Karnataka 12 Aug 2019, 5:00 am
ಗೋಕಾಕ: ಕಳೆದ ಒಂದು ವಾರದಿಂದ ನಗರ ಹಾಗೂ ಸುತ್ತಮುತ್ತಲಿನ ಜನತೆಯನ್ನು ಕಾಡಿದ ಪ್ರವಾಹ ಭಾನುವಾರ ಇಳಿಮುಖವಾಗುತ್ತಿದೆ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ ತಿಳಿಸಿದ್ದಾರೆ.
Vijaya Karnataka Web BEL-11GOK2


ಘಟಪ್ರಭಾ, ಹಿರಣ್ಯಕೇಶಿ, ಮಾರ್ಕಂಡೇಯ ನದಿಗಳ ನೀರಿನ ಹರಿವು ಕಡಿಮೆಯಾಗಿದೆ. ಆದ್ದರಿಂದ ಜನತೆಯು ಆತಂಕ ಪಡುವ ಅಗತ್ಯವಿಲ್ಲ. ತಾಲೂಕಾಡಳಿತದಿಂದ ಕಾಳಜಿ ಕೇಂದ್ರಗಳನ್ನು ತೆರೆದು ಸೌಲಭ್ಯ ನೀಡಲಾಗುತ್ತಿದೆ. ದಾನಿಗಳು ಸಹ ಮುಂದೆ ಬಂದು ಸಂತ್ರಸ್ತರಿಗೆ ನೆರವು ನೀಡುತ್ತಿರುವುದು ಎಲ್ಲರಿಗೂ ಆತ್ಮಸ್ಥೈರ್ಯ ಬಂದಂತಾಗಿದೆ. ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂತ್ರಸ್ತರ ಮಕ್ಕಳಿಗೆ ಹಾಲು ವಿತರಿಸಿದ ಇಒ:
ಖನಗಾಂವ ಗ್ರಾಮದ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದ ನೂರಾರು ಕುಟುಂಬಗಳ ಮಕ್ಕಳಿಗೆ ತಾಪಂ ಇಒ ಬಸವರಾಜ ಹೆಗ್ಗನಾಯಕ ಭಾನುವಾರ ಹಾಲು ವಿತರಿಸಿದರು. ಸಹಾಯಕ ನಿರ್ದೇಶಕರಾದ ಎಸ್‌.ಎಚ್‌.ದೇಸಾಯಿ. ಪಿಡಿಒ ಯು.ಆರ್‌. ಮನಗೂಳಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ