ಆ್ಯಪ್ನಗರ

DB Inamdar: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಡಿ.ಬಿ.ಇನಾಮದಾರ ನಿಧನ

DB Inamdar Death: ಕಾಂಗ್ರೆಸ್ ಮುಖಂಡ ಡಿಬಿ ಇನಾಮದಾರ್, ಉಸಿರಾಟದ ಸಮಸ್ಯೆಯಿಂದ ಕೊನೆಯುಸಿರೆಳೆದಿದ್ದಾರೆ. ಬೆಳಗಾವಿ, ಚೆನ್ನಮ್ಮನ ಕಿತ್ತೂರು ಭಾಗದ ಪ್ರಭಾವಿ ನಾಯಕರಾಗಿದ್ದ ಇನಾಮದಾರ ಅವರು 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

Edited byಸೌಮ್ಯಶ್ರೀ ಮಾರ್ನಾಡ್ | Vijaya Karnataka Web 25 Apr 2023, 11:04 am

ಹೈಲೈಟ್ಸ್‌:

  • ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಿ.ಬಿ.ಇನಾಮದಾರ (74) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಇನಾಮದಾರ ಮಂಗಳವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ.
  • ಚನ್ನಮ್ನನ ಕಿತ್ತೂರು ಭಾಗದಲ್ಲಿ 'ದಣಿ' ಎಂದೇ ಕರೆಯಿಸಿಕೊಂಡಿದ್ದ ಡಿ.ಬಿ.ಇನಾಮದಾರ ಕಾಂಗ್ರೆಸ್ ಹಿರಿಯ ಮುಖಂಡರಾಗಿದ್ದರು.
  • ಮಾ.3 ರಂದು ಕಿತ್ತೂರು ಕ್ಷೇತ್ರದಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲೂ ಪಾಲ್ಗೊಂಡಿದ್ದ ಡಿ.ಬಿ.ಇನಾಮದಾರ ಅವರಿಗೆ ಉಸಿರಾಟ ತೊಂದರೆ ಕಾಣಿಕೊಂಡಿದ್ದರಿಂದ ಮಾ.8 ರಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web DB Inamadara
ಬೆಳಗಾವಿ : ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಿ.ಬಿ.ಇನಾಮದಾರ (74) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಇನಾಮದಾರ ಮಂಗಳವಾರ ನಸುಕಿನ ಜಾವ ಕೊನೆಯುಸಿರೆಳೆದಿದ್ದಾರೆ.
ಚೆನ್ನಮ್ಮನ ಕಿತ್ತೂರು ಭಾಗದಲ್ಲಿ 'ದಣಿ' ಎಂದೇ ಕರೆಯಿಸಿಕೊಂಡಿದ್ದ ಡಿ.ಬಿ.ಇನಾಮದಾರ ಕಾಂಗ್ರೆಸ್ ಹಿರಿಯ ಮುಖಂಡರಾಗಿದ್ದರು . ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. ಇನ್ನೊಂದು ಬಾರಿ ವಿಧಾನಸಭೆ ಚುನಾವಣೆ ಸ್ಪರ್ಧಿಸುವ ತಯಾರಿಯಲ್ಲಿದ್ದ ಡಿಬಿ ಕ್ಷೇತ್ರದಲ್ಲಿ ಚುನಾವಣೆ ಘೋಷಣೆಗೂ ಮುಂಚೆ ಕ್ಷೇತ್ರದಲ್ಲಿ ಸಕ್ರಿಯವಾಗಿ ಓಡಾಡಿಕೊಂಡಿದ್ದರು.

Balachandra Jarkiholi: ಈಗ ಸಮೀಕ್ಷೆ ಬರಲಿ, ಏಪ್ರಿಲ್‌ 25ರ ಬಳಿಕ ಸ್ಪಷ್ಟ ಚಿತ್ರಣ ಸಿಗುತ್ತೆ: ಬಾಲಚಂದ್ರ ಜಾರಕಿಹೊಳಿ

ಮಾ.3 ರಂದು ಕಿತ್ತೂರು ಕ್ಷೇತ್ರದಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲೂ ಪಾಲ್ಗೊಂಡಿದ್ದ ಡಿ.ಬಿ.ಇನಾಮದಾರ ಅವರಿಗೆ ಉಸಿರಾಟ ತೊಂದರೆ ಕಾಣಿಕೊಂಡಿದ್ದರಿಂದ ಮಾ.8 ರಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಳ್ಳದ ಕಾರಣದಿಂದ ಕಾಂಗ್ರೆಸ್ ಟಿಕೆಟ್ ಡಿ.ಬಿ. ಸೊಸೆ ಲಕ್ಷ್ಮಿ ಇನಾಮದಾರ ಅವರಿಗೆ ನೀಡಬೇಕು ಎಂದು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರಾದರೂ ಪಕ್ಷ ಬಾಬಾಸಾಹೇಬ್ ಪಾಟೀಲ್ ರಿಗೆ ಟಿಕೆಟ್ ನೀಡಿತ್ತು.

1983 ರಿಂದ ಚನ್ನಮ್ಮನ ಕಿತ್ತೂರು ಕ್ಷೇತ್ರ ಪ್ರತಿನಿಧಿಸುತ್ತಿದ್ದ ಡಿ.ಬಿ.ಇನಾಮದಾರ ಜನತಾ ಪಕ್ಷ ಮತ್ತು ಕಾಂಗ್ರೆಸ್ ನಿಂದ ಒಂಬತ್ತು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ ಸರಕಾರದಲ್ಲಿ ವಿವಿಧ ಸಚಿವ ಸ್ಥಾನ ನಿರ್ವಹಿಸಿದ್ದರು. ಡಿ.ಬಿ.ಇನಾಮದಾರ ತಂದೆ ಬಿ.ಡಿ.ಇನಾಮದಾರ ಕೂಡ ಕ್ಷೇತ್ರವನ್ನು ಪ್ರತಿನಿಧಿಸಿ ಶಾಸಕರಾಗಿದ್ದರು.

Karnataka Elections 2023: ಬೆಳಗಾವಿಯಲ್ಲಿ ಮತ್ತೆ 'ಫ್ಯಾಮಿಲಿ' ದರ್ಬಾರ್‌! ಜಿಲ್ಲೆಯಲ್ಲಿ ಒಂದೇ ವ್ಯಕ್ತಿ, ಒಂದೇ ಕುಟುಂಬದ್ದೇ ಪ್ರಾಬಲ್ಯ
ಡಿಬಿ ಇನಾಮದಾರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. 'ಮಾಜಿ ಸಚಿವರು ಹಾಗೂ ಹಿರಿಯ ರಾಜಕಾರಣಿ ಶ್ರೀ ಡಿ.ಬಿ. ಇನಾಮದಾರ ಅವರು ನಿಧನ ಹೊಂದಿರುವ ಸುದ್ದಿ ತಿಳಿದು ದುಃಖವಾಯಿತು. ಅವರ ಅಭಿಮಾನಿಗಳಿಗೆ ಹಾಗೂ ಕುಟುಂಬ ಸದಸ್ಯರಿಗೆ ಹಿರಿಯ ನಾಯಕರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ' ಎಂದು ಟ್ವೀಟ್ ಮಾಡಿದ್ದಾರೆ.


ಬುಧವಾರ (ಏ.26) 2 ಗಂಟೆಗೆ ನೇಗಿನಹಾಳ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಇಂದು (ಮಂಗಳವಾರ) ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ನಡೆಯಬೇಕಾಗಿದ್ದ ಮುಖ್ಯಮಂತ್ರಿಗಳ ರೋಡ ಶೋ ಮತ್ತು ಸಾರ್ವಜನಿಕ ಸಭೆಗಳನ್ನು ಬಿಜೆಪಿ ರದ್ದುಗೊಳಿಸಿದೆ.
ಲೇಖಕರ ಬಗ್ಗೆ
ಸೌಮ್ಯಶ್ರೀ ಮಾರ್ನಾಡ್
ವಿಜಯ ಕರ್ನಾಟಕ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದಾರೆ. ಡಿಜಿಟಲ್ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರರಾಗಿ 7 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ರಾಜಕೀಯ, ನಾಗರಿಕರ ಸಮಸ್ಯೆಗಳು, ಬೆಂಗಳೂರು ಸ್ಥಳೀಯ ಆಡಳಿತದ ಕುಂದುಕೊರತೆಗಳ ವರದಿ, ವಿಶೇಷ ವ್ಯಕ್ತಿಗಳ ಸಂದರ್ಶನಗಳನ್ನು ಮಾಡುತ್ತಿದ್ದಾರೆ. ರಂಗಭೂಮಿ ಹಾಗೂ ಯಕ್ಷಗಾನ ಇವರ ಇತರ ಆಸಕ್ತಿಕರ ಕ್ಷೇತ್ರಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ