ಬೆಳಗಾವಿ: ಗಣೇಶ ಮೂರ್ತಿ ಪ್ರತಿಷ್ಠಾಪನಾ ಮೆರವಣಿಗೆ ಗುಂಪು ಘರ್ಷಣೆಗೆ ತಿರುಗಿ ಮಾರಕಕಾಸ್ತ್ರಗಳು ಝಳಪಿಸಿದ ಪರಿಣಾಮ ನಾಲ್ವರು ಗಾಯಗೊಂಡಿರುವ ಘಟನೆ ತಾಲೂಕಿನ ಮಂಡೋಳಿ ಗ್ರಾಮದಲ್ಲಿ ನಡೆದಿದೆ.
ಮಂಡೋಳಿ ಮಹೇಶ ಕೃಷ್ಣಾ ದಳವಿ (22), ಶೇಖರ ಕೃಷ್ಣಾ ದಳವಿ (27), ಕಲ್ಪನಾ ಕೃಷ್ಣಾ ದಳವಿ (48) ಹಾಗೂ ರಾಜು ಖಂಡೋಬಾ ಪಾಟೀಲ ಅಲಿಯಾಸ್ ಬಡಸ್ಕರ (24) ಎಂಬವರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ಒಂದು ಗುಂಪು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿತ್ತು. ಆಗ ಇದನ್ನು ಕೇಳಿದ ಮತ್ತೊಂದು ಗುಂಪು ಜಗಳಕ್ಕೆ ಬಂದಿದ್ದರಿಂದ, ಮಾತಿಗೆ ಮಾತು ಬೆಳೆದು ಗಲಾಟೆ ಶುರುವಾಗಿತ್ತು. ನಂತರ ಜಗಳ ವಿಕೋಪಕ್ಕೆ ತಿರುಗಿ ಮಾರಕಾಸ್ತ್ರಗಳಿಂದ ಮಾರಾಮಾರಿಯಾಗಿದೆ. ಇದರಲ್ಲಿ ನಾಲ್ವರು ಗಾಯಗೊಂಡಿದ್ದು, ಜಗಳ ಬಿಡಿಸಲು ಹೋದವರ ಮೇಲೂ ಹಲ್ಲೆ ನಡೆಸಲಾಗಿದೆ.
ಗುಂಪು ಘರ್ಷಣೆಯಿಂದಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಎಸಿಪಿ ಕೆ. ಶಿವಾರೆಡ್ಡಿ, ಇನ್ಸ್ಪೆಕ್ಟರ್ ಸಂಗಮೇಶ ಶಿವಯೋಗಿ ಹಾಗೂ ಪೊಲೀಸರು ಭೇಟಿ ನೀಡಿ ಬಂದೋಬಸ್ತ್ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 17 ಜನರ ವಿರುದ್ಧ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡೋಳಿ ಮಹೇಶ ಕೃಷ್ಣಾ ದಳವಿ (22), ಶೇಖರ ಕೃಷ್ಣಾ ದಳವಿ (27), ಕಲ್ಪನಾ ಕೃಷ್ಣಾ ದಳವಿ (48) ಹಾಗೂ ರಾಜು ಖಂಡೋಬಾ ಪಾಟೀಲ ಅಲಿಯಾಸ್ ಬಡಸ್ಕರ (24) ಎಂಬವರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ಒಂದು ಗುಂಪು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿತ್ತು. ಆಗ ಇದನ್ನು ಕೇಳಿದ ಮತ್ತೊಂದು ಗುಂಪು ಜಗಳಕ್ಕೆ ಬಂದಿದ್ದರಿಂದ, ಮಾತಿಗೆ ಮಾತು ಬೆಳೆದು ಗಲಾಟೆ ಶುರುವಾಗಿತ್ತು. ನಂತರ ಜಗಳ ವಿಕೋಪಕ್ಕೆ ತಿರುಗಿ ಮಾರಕಾಸ್ತ್ರಗಳಿಂದ ಮಾರಾಮಾರಿಯಾಗಿದೆ. ಇದರಲ್ಲಿ ನಾಲ್ವರು ಗಾಯಗೊಂಡಿದ್ದು, ಜಗಳ ಬಿಡಿಸಲು ಹೋದವರ ಮೇಲೂ ಹಲ್ಲೆ ನಡೆಸಲಾಗಿದೆ.
ಗುಂಪು ಘರ್ಷಣೆಯಿಂದಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಎಸಿಪಿ ಕೆ. ಶಿವಾರೆಡ್ಡಿ, ಇನ್ಸ್ಪೆಕ್ಟರ್ ಸಂಗಮೇಶ ಶಿವಯೋಗಿ ಹಾಗೂ ಪೊಲೀಸರು ಭೇಟಿ ನೀಡಿ ಬಂದೋಬಸ್ತ್ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 17 ಜನರ ವಿರುದ್ಧ ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.