ಆ್ಯಪ್ನಗರ

ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ

ಬೈಲಹೊಂಗಲ: ತಾಲೂಕಿನ ಬೈಲವಾಡ ಗ್ರಾಪಂ ವ್ಯಾಪ್ತಿಯ ಯರಡಾಲ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೂಲಿ ಕಾರ್ಮಿಕರಿಗೆ ...

Vijaya Karnataka 13 Jun 2019, 5:00 am
ಬೈಲಹೊಂಗಲ: ತಾಲೂಕಿನ ಬೈಲವಾಡ ಗ್ರಾಪಂ ವ್ಯಾಪ್ತಿಯ ಯರಡಾಲ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
Vijaya Karnataka Web BEL-12HTP1


ತಾಪಂ ಸಹಾಯಕ ನಿರ್ದೇಶಕ ಸುಭಾಶ ಸಂಪಗಾವಿ ಮಾತನಾಡಿ, ಯಾರೂ ಗುಳೆ ಹೋಗದಂತೆ ಗ್ರಾಮೀಣ ಬಡ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸರಕಾರ ಈ ಉದ್ಯೋಗ ಖಾತ್ರಿ ಯೋಜನೆ ರೂಪಿಸಿದ್ದು, ಇದನ್ನು ಸದ್ಭಳಕೆ ಮಾಡಿಕೊಂಡು ಸವಲತ್ತುಗಳನ್ನು ಪಡೆಯಬೇಕೆಂದರು.

ಪಿಡಿಒ ಬಿ.ಎಲ್‌. ಬೆಳವಲ್‌ ಮಾತನಾಡಿ, ಉದ್ಯೋಗ ಖಾತ್ರಿ ಕಾರ್ಯದಲ್ಲಿ ನಿರತರಾಗಿರುವ ಕಾರ್ಮಿಕರಿಗೆ ಉಚಿತ ಆರೋಗ್ಯ ಕಲ್ಪಿಸಲಾಗಿದ್ದು, ಪ್ರತಿಯೊಬ್ಬರು ಇದರ ಪ್ರಯೋಜನ ಪಡೆಯಬೇಕೆಂದರು.

ಬೈಲವಾಡ ಗ್ರಾಪಂ ಅಧ್ಯಕ್ಷೆ ದ್ರಾಕ್ಷಾಯಣಿ ಗಿರೆಪ್ಪಗೌಡ್ರ, ಉಪಾಧ್ಯಕ್ಷ ಭೀಮಪ್ಪ ಕಮತಗಿ, ಪಿಡಿಒ ಸಿದ್ದಪ್ಪ ಮಳಗಲಿ, ಡಾ. ದೀಪಾ ಹಿರೇಮಠ, ಡಾ. ಆನಂದ ಖನ್ನಿನಾಯ್ಕರ, ಡಾ. ನಾಗರಾಜ ಕಡೆ, ಗ್ರಾಪಂ ಸದಸ್ಯ ನಿಂಗಪ್ಪ ರಾಜಗೋಳಿ, ನಭೀನಾ ನದಾಪ್‌, ಕಾಶವ್ವಾ ಬೈಲಪ್ಪನವರ, ಅಂಗನವಾಡಿ ಕಾರ್ಯಕರ್ತೆ ಗಂಗಮ್ಮಾ ರಾಜಗೋಳಿ, ಸಂಜಯ ಗಿರೆಪ್ಪಗೌಡರ, ಮಾಯಪ್ಪ ಹೆಗಡೆ ಹಾಗೂ ಗ್ರಾಪಂ ಸಿಬ್ಬಂದಿ, ಆರೋಗ್ಯ ಇಲಾಖೆಯ ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ