ಆ್ಯಪ್ನಗರ

ಇಂದು ಗಂಗಾಧರ ಸ್ವಾಮೀಜಿ ಪುಣ್ಯಾರಾಧನೆ

ಪಟ್ಟಣದ ಶಾಖಾ ಮೂರುಸಾವಿರ ಮಠದ ಲಿಂ ಶ್ರೀ ಗಂಗಾಧರ ಸ್ವಾಮೀಜಿಯವರ 10ನೇ ವರ್ಷದ ಪುಣ್ಯಾರಾಧನೆ ಮೇ 28ರಂದು ಬೆಳಗ್ಗೆ 1130ಕ್ಕೆ ಮಠದ ಆವರಣದಲ್ಲಿ ನಡೆಯಲಿದೆ...

Vijaya Karnataka 28 May 2018, 5:00 am
ಬೈಲಹೊಂಗಲ: ಪಟ್ಟಣದ ಶಾಖಾ ಮೂರುಸಾವಿರ ಮಠದ ಲಿಂ. ಶ್ರೀ ಗಂಗಾಧರ ಸ್ವಾಮೀಜಿಯವರ 10ನೇ ವರ್ಷದ ಪುಣ್ಯಾರಾಧನೆ ಮೇ 28ರಂದು ಬೆಳಗ್ಗೆ 11.30ಕ್ಕೆ ಮಠದ ಆವರಣದಲ್ಲಿ ನಡೆಯಲಿದೆ.
Vijaya Karnataka Web BEL-27HTP2   GANGDHAR SWAMIJI

ಶ್ರೀಮಠದ ಪೀಠಾಧಿಪತಿ ಶ್ರೀ ಪ್ರಭುನೀಲಕಂಠ ಸ್ವಾಮೀಜಿ ನೇತೃತ್ವದಲ್ಲಿ ಬೆಳಗ್ಗೆ 8ಕ್ಕೆ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಮಹಾಮಂಗಳಾರತಿ, ವಿಶೇಷ ಪೂಜೆ, ಪುನಸ್ಕಾರಗಳು ನಡೆಯಲಿವೆ. ಮುರಗೋಡದ ಶ್ರೀ ನೀಲಕಂಠ ಸ್ವಾಮೀಜಿ, ಹೊಸೂರ ಶ್ರೀ ಗಂಗಾಧರ ಸ್ವಾಮೀಜಿ, ರುದ್ರಾಕ್ಷಿಮಠದ ಶ್ರೀ ಬಸವಲಿಂಗ ಸ್ವಾಮೀಜಿ, ಮುನವಳ್ಳಿಯ ಶ್ರೀ ಮುರುಘೇಂದ್ರ ಸ್ವಾಮೀಜಿ, ಕಟಕೋಳದ ಶ್ರೀ ಸಚ್ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶ್ರೀ ನೀಲಕಂಠೇಶ್ವರ ವಿದ್ಯಾವರ್ಧಕ ಶಿಕ್ಷ ಣ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಚಂದ್ರಶೇಖರ ಸಾಧುನವರ, ಆಡಳಿತ ಮಂಡಳಿ ಸದಸ್ಯರು, ಶಿಕ್ಷ ಣ ಸಂಸ್ಥೆಯ ಶಿಕ್ಷ ಕರು, ಶಿಕ್ಷ ಕಿಯರು, ವಿದ್ಯಾರ್ಥಿಗಳು, ಶ್ರೀ ಮಠದ ಭಕ್ತರು ಉಪಸ್ಥಿತರಿರುವರು.



ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ