ಆ್ಯಪ್ನಗರ

ಸಾರಿಗೆ ನೌಕರರಿಗೆ ಸರಕಾರಿ ನೌಕರರ ಸ್ಥಾನಮಾನ ನೀಡಿ

ಬೆಳಗಾವಿ : ಸಾರಿಗೆ ಸಂಸ್ಥೆಯ ನೌಕರರನ್ನು ಸರಕಾರಿ ...

Vijaya Karnataka 17 Jun 2019, 5:00 am
ಬೆಳಗಾವಿ : ಸಾರಿಗೆ ಸಂಸ್ಥೆಯ ನೌಕರರನ್ನು ಸರಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಭಾನುವಾರ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗದ ನೌಕರರು ನಗರದಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
Vijaya Karnataka Web BEL-16 LBS 2


ಸಾರಿಗೆ ನೌಕರರಿಗೆ ಹೆಚ್ಚಿನ ಸಮಯ ದುಡಿಸಿಕೊಂಡು ಕಡಿಮೆ ಸಂಬಳ ನೀಡಲಾಗುತ್ತಿದೆ. ರಾಜ್ಯದ ಸರಕಾರಿ ನೌಕರರಿಗೆ ನೀಡುತ್ತಿರುವ ಯಾವುದೇ ಸೌಲಭ್ಯ ನೀಡುತ್ತಿಲ್ಲ. ಇದರಿಂದ ಸಾರಿಗೆ ನೌಕರರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಕಡಿಮೆ ವೇತನ ಪಡೆದು ಹಗಲಿರುಳು ಕೆಲಸ ನಿರ್ವಹಿಸುವ ಸಾರಿಗೆ ಸಿಬ್ಬಂದಿಗೆ ಸರಕಾರಿ ನೌಕರರಿಗೆ ನೀಡುವ ಸೌಲಭ್ಯ ನೀಡುವಂತೆ ಮುಖ್ಯಮಂತ್ರಿ, ಸಾರಿಗೆ ಸಚಿವರು, ಎಲ್ಲ ವಿಧಾನಸಭಾ ಸದಸ್ಯರಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೂ ಸರಕಾರ ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಂಧ್ರಪ್ರದೇಶದಲ್ಲಿ ಈಗಾಗಲೇ ಸಾರಿಗೆ ನೌಕರರನ್ನು ಸರಕಾರಿ ನೌಕರರೆಂದು ಪರಿಗಣಿಸಿ ಎಲ್ಲ ಸೌಲಭ್ಯ ನೀಡಲಾಗುತ್ತಿದೆ. ಅದೇ ಮಾದರಿಯಲ್ಲಿ ರಾಜದ್ಯ ಎಲ್ಲ ಸಾರಿಗೆ ನಿಗಮದ ನೌಕರರನ್ನು ಸರಕಾರಿ ನೌಕರರೆಂದು ಪರಿಗಣಿಸಬೇಕು. ಸರಕಾರಿ ನೌಕರರಿಗೆ ನೀಡುವ ವೇತನ, ಬಡ್ತಿ ಮತ್ತಿತರ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.

ಸಿದ್ರಾಮ ಸಿ., ರಾಜು ಪನ್ಯಾಗೋಳ, ವಿಜಯ ಕಾಂಬಳೆ, ಎಂ.ಎಂ. ಬಣ್ಣಿಕೊಪ್ಪ, ಡಿ.ಎನ್‌. ಕಾಂಬಳೆ, ದುರ್ಗಾರಾಮ ಬಿ., ರಾಜು ಗಡೆದ ಮೊದಲಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ