ಆ್ಯಪ್ನಗರ

ಗೋಕಾಕ: ಸಾರ್ವಜನಿಕರಿಗೆ ಸಿಹಿ ಹಂಚಿ ವಿಜಯೋತ್ಸವ

ಗೋಕಾಕ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಹುಮತ ಪಡೆದ ಹಿನ್ನಲೆಯಲ್ಲಿ ಇಲ್ಲಿಯ ಶ್ರೀರಾಮ ಸೇನೆ, ಬಿಜೆಪಿ ನಗರ ಘಟಕ ...

Vijaya Karnataka 24 May 2019, 5:00 am
ಗೋಕಾಕ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಬಹುಮತ ಪಡೆದ ಹಿನ್ನಲೆಯಲ್ಲಿ ಇಲ್ಲಿಯ ಶ್ರೀರಾಮ ಸೇನೆ, ಬಿಜೆಪಿ ನಗರ ಘಟಕ ಪದಾಧಿಕಾರಿಗಳು ನಗರದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಸೇರಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
Vijaya Karnataka Web BEL-23 GKK-3


ನಂತರ ಬಸ್‌ ನಿಲ್ದಾಣ ಮಾರ್ಗವಾಗಿ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿ ಸಾರ್ವಜನಿಕರಿಗೆ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ಅಶೋಕ ಪೂಜಾರಿ, 'ಇಂದಿನ ಪಲಿತಾಂಶದಿಂದ ಭಾರತದ ಕೀರ್ತಿ ಪತಾಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿದೆ. ನರೇಂದ್ರ ಮೋದಿ ಅವರ ನಾಯಕತ್ವವನ್ನು ದೇಶದ ಜನತೆ ಮನಃಪೂರ್ವಕವಾಗಿ ಒಪ್ಪಿ ಬೆಂಬಲಿಸಿದ್ದಾರೆ. ಮೋದಿ ಅವರ ಸಮರ್ಥ ನಾಯಕತ್ವದಿಂದ ಅಂತಾರಾಷ್ಟ್ರೀಯ ಸಾರ್ವಭೌಮತೆಯಲ್ಲಿ ಇನ್ನೂ ಹೆಚ್ಚಿನ ಗೌರವ ಸಿಗಲಿದೆ. ಸಮಗ್ರ ಭಾರತ ಅಭಿವೃದ್ಧಿ ಪಥದತ್ತ ಸಾಗಲಿದ್ದು, ಇದಕ್ಕೆ ಕಾರಣೀಭೂತರಾದ ಪ್ರಬುದ್ಧ ಮತದಾರರನ್ನು ಅಭಿನಂದಿಸುತ್ತೇನೆ' ಎಂದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಎಸ್‌.ವಿ. ದೇಮಶೆಟ್ಟಿ, ಶ್ರೀರಾಮ ಸೇನೆಯ ಮುಖಂಡರಾದ ರಾಜು ಜಾಧವ, ಸುನೀಲ ಮುರ್ಕಿಭಾಂವಿ, ಡಾ. ರಮೇಶ ಪಟಗುಂದಿ, ಶ್ರೀದೇವಿ ತಡಕೋಡ ಅವರು ಮಾತನಾಡಿ, ಈ ವಿಜಯವನ್ನು ಇಡಿ ಜಗತ್ತೇ ನಿಬ್ಬೆರಗಾಗಿ ನೋಡುತ್ತಿದ್ದು, ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷ ರಗಳಲ್ಲಿ ಬರೆದಿಡುವಂಥ ದಿನವಾಗಿದೆ. ಇನ್ನು ಮುಂದಿನ 5 ವರ್ಷಗಳಲ್ಲಿ ನಮ್ಮ ದೇಶ ಅಭಿವೃದ್ಧಿ ಹೊಂದಿ ವಿಶ್ವ ಗುರುವಾಗಿ ಸಂಭ್ರಮಿಸಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಕುಸಮಾ ಖನಗಾಂವಿ, ಮಹಾಂತೇಶ ತಾಂವಶಿ, ಕೇದಾರಿ ಜಾಧವ, ಬಸು ಪಡತಾರೆ, ಅಮೀತ ವಣ್ಣೂರ, ಪ್ರಸಾದ ಬಡಿಗೇರ, ಕೃಷ್ಣಾ ಗುಡ್ಡದಮನಿ, ಸುನೀಲ ಸುಭಂಜಿ, ಶಿವು ಪೂಜೇರಿ ಸೇರಿದಂತೆ ಅನೇಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ