ಆ್ಯಪ್ನಗರ

ವೇತನ ಹೆಚ್ಚಳಕ್ಕೆ ಚಿನ್ನದ ಗಣಿ ಕಾರ್ಮಿಕರ ಒತ್ತಾಯ

ಬೆಳಗಾವಿ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬುಧವಾರ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕರ ಸಂಘದ ಸದಸ್ಯರು ಸುವರ್ಣ ...

Vijaya Karnataka 20 Dec 2018, 5:00 am
ಬೆಳಗಾವಿ : ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬುಧವಾರ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕರ ಸಂಘದ ಸದಸ್ಯರು ಸುವರ್ಣ ವಿಧಾನಸೌಧದ ಸಮೀಪ ಪ್ರತಿಭಟನೆ ನಡೆಸಿದರು.
Vijaya Karnataka Web BEL-19 LBS 8


ರಾಜ್ಯ ಸರಕಾರದ ಲಾಭದಾಯಕ ಉದ್ಯಮವಾದ ಹಟ್ಟಿ ಚಿನ್ನದ ಗಣಿಯಲ್ಲಿ 4,056 ಕಾರ್ಮಿಕರು ಹಾಗೂ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಕಳೆದ 2016 ರಿಂದ ಈವರೆಗೆ ಕಾರ್ಮಿಕರಿಗೆ ವೇತನ ಹೆಚ್ಚಳ ಮಾಡಿಲ್ಲ. ಹಳೇ ವೇತನದ ಒಂಪ್ಪದ 2016ರಲ್ಲಿ ಮುಕ್ತಾಯವಾಗಿದ್ದರು. ಹೊಸ ವೇತನ ನೀಡಲು ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರಕಾರ ತಕ್ಷ ಣ ಎಲ್ಲ ಕಾರ್ಮಿಕರ ಹಾಗೂ ಸಿಬ್ಬಂದಿ ವೇತನ ಹೆಚ್ಚಳ ಮಾಡಬೇಕು. ಗುಂಜನಕೃಷ್ಣ ನೇತೃತ್ವದ ಸಮಿತಿ ವರದಿ ಶಿಪಾರಸು ಜಾರಿ ಮಾಡಬೇಕು ಮಾಡಬೇಕು ಎಂದು ಸರಕಾರಕ್ಕೆ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ವಾಲೇಬಾಬು, ಪ್ರಧಾನ ಕಾರ್ಯದರ್ಶಿ ಎಂ.ಡಿ. ಅಮೀರ ಅಲಿ, ಆರ್‌.ಮಾನಸಯ್ಯ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ