ಆ್ಯಪ್ನಗರ

ಡ್ರಗ್ಸ್‌ ಮುಕ್ತ ಕರ್ನಾಟಕಕ್ಕೆ ಸರಕಾರದ ಪಣ: ಮಹಾಂತೇಶ ಕವಟಗಿಮಠ ಹೇಳಿಕೆ

ಚಿಕ್ಕೋಡಿ: ಡ್ರಗ್‌ ದಂಧೆಯಲ್ಲಿ ತೊಡಗಿಸಿಕೊಂಡವರನ್ನು ...

Vijaya Karnataka 18 Sep 2020, 5:00 am
ಚಿಕ್ಕೋಡಿ: ಡ್ರಗ್‌ ದಂಧೆಯಲ್ಲಿತೊಡಗಿಸಿಕೊಂಡವರನ್ನು ಶಿಕ್ಷೆಗೆ ಗುರಿಪಡಿಸುವ ಮುಖಾಂತರ ಡ್ರಗ್ಸ್‌ ಮುಕ್ತ ಕರ್ನಾಟಕವನ್ನಾಗಿಸಲು ಸರಕಾರ ಪಣ ತೊಟ್ಟಿದೆ ಎಂದು ವಿಧಾನ ಪರಿಷತ್‌ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.
Vijaya Karnataka Web Mahantesh Kavatagimath
ಮಹಾಂತೇಶ ಕವಟಗಿಮಠ


ಪಟ್ಟಣದ ಜಯಪ್ರಕಾಶ ನಾರಾಯಣ ಭವನದಲ್ಲಿಗುರುವಾರ ಸುದ್ದಿಗೋಷ್ಠಿಯಲ್ಲಿಅವರು ಮಾತನಾಡಿದರು.

ಡ್ರಗ್‌ ದಂಧೆಯಲ್ಲಿತೊಡಗಿರುವವರನ್ನು ಹಿಡಿದು ಅವರಿಗೆ ತಕ್ಕ ಪಾಠ ಕಲಿಸುವ ಕೆಲಸವನ್ನು ಸರಕಾರ ಮಾಡಲಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಯುವ ಜನಾಂಗ ಇಂತಹ ದುಶ್ಚಟಗಳಿಂದ ದೂರವಿರಬೇಕು. ಬೆಂಗಳೂರಿನ ಡಿಜಿ ಹಳ್ಳಿ ಮತ್ತು ಉಡ್ತಾ ಪಂಜಾಬ್‌ನಂತೆ ಕರ್ನಾಟಕವಾಗಬಾರದು. ಈ ಕುರಿತು ಸೆ. 21ರಿಂದ ಆರಂಭಗೊಳ್ಳಲಿರುವ ಅಧಿವೇಶನದಲ್ಲಿಸರಕಾರದ ಗಮನ ಸೆಳೆಯಲಾಗುವುದು ಎಂದರು.

ಜಿಪಂ ಮಾಜಿ ಸದಸ್ಯ ಮಹೇಶ ಭಾತೆ, ಸತೀಶ ಅಪ್ಪಾಜಿಗೋಳ, ಅಪ್ಪಾಸಾಬ ಚೌಗಲಾ, ವಿಶ್ವನಾಥ ಕಾಮಗೌಡ, ರಮೇಶ ಕಾಳನ್ನವರ ಮುಂತಾದವರು ಉಪಸ್ಥಿತರಿದ್ದರು.

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿಸಾರ್ವಜನಿಕರಿಗೆ ಸೂಕ್ತ ಚಿಕಿತ್ಸೆ ಸಿಗದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಕುರಿ ಕುರಿತು ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಆಸ್ಪತ್ರೆಯ ವ್ಯವಸ್ಥೆ ಸುಧಾರಿಸಲು ಕ್ರಮ ವಹಿಸುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
- ಮಹಾಂತೇಶ ಕವಟಗಿಮಠ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ