ಆ್ಯಪ್ನಗರ

ನೆರೆ ಪರಿಸ್ಥಿತಿ ನಿಭಾಯಿಸುವಲ್ಲಿಸರಕಾರಗಳು ವಿಫಲ

ಕಾಗವಾಡ: ಹಿಂದೆಂದೂ ಕಾಣದ ರೀತಿಯಲ್ಲಿಸಂಭವಿಸಿದ ಪ್ರವಾಹ ಪರಿಸ್ಥಿತಿ ಎದುರಿಸುವಲ್ಲಿ ರಾಜ್ಯ ...

Vijaya Karnataka 9 Sep 2019, 5:00 am
ಕಾಗವಾಡ: ಹಿಂದೆಂದೂ ಕಾಣದ ರೀತಿಯಲ್ಲಿಸಂಭವಿಸಿದ ಪ್ರವಾಹ ಪರಿಸ್ಥಿತಿ ಎದುರಿಸುವಲ್ಲಿರಾಜ್ಯ ಮತ್ತು ಕೇಂದ್ರ ಸರಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಮಾಜಿ ಇಂಧನ ಸಚಿವ ವೀರಕುಮಾರ ಪಾಟೀಲ ಆರೋಪಿಸಿದರು.
Vijaya Karnataka Web 08 KAGWAD 3 NEWS PHOTO_53


ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ಪ್ರವಾಹ ಬಂದು ಒಂದು ತಿಂಗಳು ಗತಿಸಿದೆ. ಈ ವರೆಗೆ ಕೇವಲ ಪರಿಹಾರವಾಗಿ 10 ಸಾವಿರ ರೂ. ಕೆಲವರಿಗೆ ಮಾತ್ರ ದೊರೆತಿದೆ. ಇಲ್ಲಿಯ ಜನ ತಮ್ಮ ಆಸ್ತಿ-ಪಾಸ್ತಿ ಕಳೆದುಕೊಂಡು ಆತಂಕದಲ್ಲಿದ್ದಾರೆ. ಶಾಶ್ವತ ಪರಿಹಾರಕ್ಕಾಗಿ ಕಾಯುತ್ತಿದ್ದರೂ, ಸರಕಾರದ ಕೆಲ ಸಚಿವರು ಗ್ರಾಮಗಳಿಗೆ ಭೇಟಿ ನೀಡಿ ಆಶ್ವಾಸನೆ ಮಾತ್ರ ನೀಡುತ್ತಿದ್ದಾರೆ ಎಂದು ದೂರಿದರು.

ಬೆಳಗಾವಿ ಜಿಲ್ಲೆಗೆ ಉಪ ಮುಖ್ಯಮಂತ್ರಿ ಸಹಿತ ಮಂತ್ರಿ ಸ್ಥಾನ ದೊರೆತಿದೆ. ಆದರೆ ಜಿಲ್ಲೆಗೆ ನ್ಯಾಯ ದೊರೆತಿಲ್ಲ. ಕಬ್ಬು ಸಂಪೂರ್ಣ ನಾಶವಾಗಿದ್ದು, ಒಂದು ಎಕರೆ ಕ್ಷೇತ್ರದಲ್ಲಿಸುಮಾರು 40 ಟನ್‌ ಲೆಕ್ಕದಲ್ಲಿಪರಿಗಣಿಸಿದರೆ ಸುಮಾರು 1 ಲಕ್ಷ ರೂ. ಪ್ರತಿ ಎಕರೆಗೆ ಪರಿಹಾರ ನೀಡಬೇಕು. ರೈತರು ಪಡೆದ ಬೆಳೆ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯ ಸರಕಾರದ ಸಚಿವರು, ಸಂಸದರು, ಕೇಂದ್ರ ಸರಕಾರದೊಂದಿಗೆ ಚರ್ಚಿಸಿ ವಿಶೇಷ ಪ್ಯಾಕೇಜ್‌ ನೀಡಿ ಸಮಸ್ಯೆ ಇತ್ಯರ್ಥಗೊಳಿಸಬೇಕು. ಇದೇ ರೀತಿ ವಿಳಂಬಿಸಿದರೆ ಸರಕಾರಗಳ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ