ಆ್ಯಪ್ನಗರ

ಸಾಹಿತ್ಯ ಸಮ್ಮೇಳನದ ಅದ್ಧೂರಿ ಮೆರವಣಿಗೆ

ಚಿಕ್ಕೋಡಿ: ತ್ರಿವಿಧ ದಾಸೋಹದ ನೆಲದಲ್ಲಿ ಆಯೋಜನೆಗೊಂಡ 9ನೇ ಹುಕ್ಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಿಮಿತ್ತ ಹಮ್ಮಿಕೊಂಡ ...

Vijaya Karnataka 25 Feb 2019, 5:00 am
ಚಿಕ್ಕೋಡಿ : ತ್ರಿವಿಧ ದಾಸೋಹದ ನೆಲದಲ್ಲಿ ಆಯೋಜನೆಗೊಂಡ 9ನೇ ಹುಕ್ಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಿಮಿತ್ತ ಹಮ್ಮಿಕೊಂಡ ಮೆರವಣಿಗೆ ಗ್ರಾಮದ ಸರಕಾರಿ ಗಂಡು ಮಕ್ಕಳ ಶಾಲೆಯ ಬಳಿ ಅದ್ಧೂರಿ ಚಾಲನೆ ನೀಡಲಾಯಿತು.
Vijaya Karnataka Web BEL-24CKD11


ಹುಕ್ಕೇರಿ ತಾಲೂಕಿನ ನಿಡಸೋಸಿಯ ಪಾಲಿಟೆಕ್ನಿಕ್ ಪ್ರಾಚಾರ್ಯ ಬಿ.ಆರ್‌.ಉಮರಾಣಿ ಕನ್ನಡ ಬಾವುಟ ಹಾರಾಡಿಸುವ ಮೂಲಕ ಚಾಲನೆ ನೀಡಿದರು. ಸಮ್ಮೇಳನದ ಸರ್ವಾಧ್ಯಕ್ಷ ಲೋಕನಗೌಡ ವೆಂಕನಗೌಡ ಪಾಟೀಲ ಹಾಗೂ ವಿದ್ಯಾವತಿ ದಂಪತಿಯನ್ನು ಸಿಂಗರಿಸಿದ ಎತ್ತಿನ ಬಂಡಿಯಲ್ಲಿ ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು.

ಸರಕಾರಿ ಕನ್ನಡ ಶಾಲೆಯಿಂದ ಆರಂಭಗೊಂಡ ಮೆರವಣಿಗೆಗೆ ನೂರಾರು ಮಹಿಳೆಯರು ಪೂರ್ಣಕುಂಭ ಹೊತ್ತ ಮಹಿಳೆಯರು ಮೆರಗು ತಂದುಕೊಟ್ಟರು. ಅಲ್ಲದೇ ರಾಷ್ಟ್ರಧ್ವಜ ವರ್ಣದ ಬಟ್ಟೆ ಧರಿಸಿದ್ದ ಶಾಲಾ ಮಕ್ಕಳು ನಡೆಸಿಕೊಟ್ಟ ಲೇಜಿಂ ಪ್ರದರ್ಶನ ಆಕರ್ಷಣೀಯವಾಗಿತ್ತು.

ರಾಷ್ಟ್ರಧ್ವಜಾರೋಹಣ ನೆರವೇರಿಸಿದ ನಿಡಸೋಸಿ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು ಮಾತನಾಡಿದರು. ಕಸಾಪ ವಲಯ ಅಧ್ಯಕ್ಷ ಕಿರಣ ನೇಸರಿ, ಕಸಾಪ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ