ಆ್ಯಪ್ನಗರ

ಬೆಳಗಾವಿ ರಸ್ತೆಗಳ ಅಭಿವೃದ್ಧಿಗೆ ಅನುದಾನ: ಗಡ್ಕರಿ ಭರವಸೆ

Vijaya Karnataka 9 Jun 2018, 5:00 am
ಬೆಳಗಾವಿ: ನಗರದ ರಸ್ತೆಗಳ ಅಭಿವೃದ್ಧಿಗೆ ಅಗತ್ಯ ಪ್ರಮಾಣದ ಹಣ ನೀಡುವುದಾಗಿ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ಇಲ್ಲಿನ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರಿಗೆ ಭರವಸೆ ನೀಡಿದ್ದಾರೆ.
Vijaya Karnataka Web BLG-0806-2-52-8RAJU-1


ಮುಂಬಯಿಯಲ್ಲಿ ಶುಕ್ರವಾರ ಸಚಿವರನ್ನು ಭೇಟಿ ಮಾಡಿದ ಅನಿಲ ಬೆನಕೆ, ಸ್ಮಾರ್ಟ್‌ ಸಿಟಿ ಯೋಜನೆ ಹೊರತಾದ ರಸ್ತೆಗಳನ್ನು ಆಧುನಿಕ ರೀತಿಯಲ್ಲಿ ಹಾಗೂ ಮಳೆಗಾಲಕ್ಕೆ ತಡೆದುಕೊಳ್ಳುವ ರೀತಿಯಲ್ಲಿ ನಿರ್ಮಿಸಬೇಕಿದೆ. ಅನೇಕ ರಸ್ತೆಗಳು ತೀವ್ರ ಹದಗೆಟ್ಟಿವೆ. ಇವುಗಳಿಗೆ ತುರ್ತುಕ್ರಮದ ಅಗತ್ಯವಿದ್ದು, ಅನುದಾನ ನೀಡಬೇಕೆಂದು ವಿನಂತಿಸಿದರು. ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಅಗತ್ಯ ಅನುದಾನ ನೀಡಲಾಗುವುದು. ಕೂಡಲೇ ರಸ್ತೆ ಕಾಮಗಾರಿಗಳ ಅಂದಾಜು ಮೊತ್ತ ಹಾಗೂ ನೀಲನಕ್ಷೆಯನ್ನು ತಮ್ಮ ದೆಹಲಿ ಕಚೇರಿಗೆ ಕಳುಹಿಸಿ. ಅಲ್ಲಿನ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು ಎಂದರು.

ಸಚಿವರ ಸೂಚನೆ ಮೇರೆಗೆ ಕಾಮಗಾರಿಗಳ ಅಂದಾಜು ಮೊತ್ತ ಹಾಗೂ ಅವುಗಳ ನೀಲನಕ್ಷೆಯೊಂದಿಗೆ ಪ್ರಸ್ತಾವನೆ ಸಿದ್ಧಪಡಿಸಿ ಕಳುಹಿಸಲಾಗುವುದು ಎಂದು ಶಾಸಕ ಅನಿಲ ಬೆನಕೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ