ಆ್ಯಪ್ನಗರ

ಹೈದರಾಬಾದ್ ಫಲಿತಾಂಶ ಮಹಾ ವಿಜಯದ ಪ್ರಥಮ ಹೆಜ್ಜೆ - ಸಿ.ಟಿ. ರವಿ

ದಕ್ಷಿಣ ಭಾರತದಲ್ಲಿ ಬಿಜೆಪಿ ವಿಸ್ತರಣೆ ಅವಕಾಶ ಇದೆ ಎಂಬುದು ಗ್ರೇಟರ್‌ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಿಂದ ಸಾಬೀತಾಗಿದೆ. ಇದು ಮಹಾ ವಿಜಯದ ಪ್ರಥಮ ಹೆಜ್ಜೆ. ಸೀಮೋಲಂಘನ ಕೆಲಸ ಹೈದರಾಬಾದ್‌ನಲ್ಲಿ ಆಗಿದೆ ಎಂದು ಸಿಟಿ ರವಿ ಹೇಳಿದ್ದಾರೆ.

Vijaya Karnataka 4 Dec 2020, 8:14 pm
ಬೆಳಗಾವಿ: ಗ್ರೇಟರ್‌ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಮೂಲಕ ಬಿಜೆಪಿಯ ವಿಶ್ವಾಸ ಹೆಚ್ಚಾಗಿದೆ. ಭವಿಷ್ಯದಲ್ಲಿ ತೆಲಂಗಾಣದಲ್ಲಿ ರಾಷ್ಟ್ರೀಯ ವಿಚಾರದ ರಾಜಕಾರಣ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಿಶ್ವಾಸ ವ್ಯಕ್ತಪಡಿಸಿದರು.
Vijaya Karnataka Web CT Ravi


ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದಕ್ಷಿಣ ಭಾರತದಲ್ಲಿ ಬಿಜೆಪಿ ವಿಸ್ತರಣೆ ಅವಕಾಶ ಇದೆ ಎಂಬುದು ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಿಂದ ಸಾಬೀತಾಗಿದೆ. ಇದು ಮಹಾ ವಿಜಯದ ಪ್ರಥಮ ಹೆಜ್ಜೆ. ಸೀಮೋಲಂಘನ ಕೆಲಸ ಹೈದರಾಬಾದ್‌ನಲ್ಲಿ ಆಗಿದೆ," ಎಂದರು.

ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹಿಂದೆಂದಿಗಿಂತಲೂ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಂಡಿದ್ದು ಟಿಆರ್‌ಎಸ್‌ ನಂತರದ ಸ್ಥಾನ ಪಡೆದುಕೊಂಡಿದೆ. ಸದ್ಯದ ಮಾಹಿತಿ ಪ್ರಕಾರ 150 ಸ್ಥಾನಗಳಲ್ಲಿ ಟಿಆರ್‌ಎಸ್‌ 53 ಸ್ಥಾನಗಳನ್ನು ಗೆದ್ದುಕೊಂಡಿದ್ದು 5 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 30 ಸ್ಥಾನ ಗೆದ್ದುಕೊಂಡಿದ್ದು 17 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಎಐಎಂಐಎಂ 42 ಸ್ಥಾನಗಳನ್ನು ಗೆದ್ದಿದ್ದು 1 ಕ್ಷೇತ್ರದಲ್ಲು ಮುನ್ನಡೆ ಹೊಂದಿದೆ. ಕಾಂಗ್ರೆಸ್‌ ಕೇವಲ 2 ಸ್ಥಾನ ಗೆದ್ದುಕೊಂಡಿದೆ. ಬಿಜೆಪಿ ಎರಡನೇ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿರುವ ಹಿನ್ನೆಲೆಯಲ್ಲಿ ಸಿಟಿ ರವಿ ಈ ರೀತಿ ಪ್ರತಿಕ್ರಿಯೆ ನೀಡಿದರು.

GHMC ಮತ ಎಣಿಕೆ: ಟಿಆರ್‌ಎಸ್‌ಗೆ ಮುನ್ನಡೆ, 2ನೇ ಸ್ಥಾನಕ್ಕೆ ಬಿಜೆಪಿ-ಎಐಎಂಐಎಂ ನಡುವೆ ಪೈಪೋಟಿ!
ಮರಾಠರ ಅಭಿವೃದ್ಧಿಗಾಗಿ ಮರಾಠಾ ಪ್ರಾಧಿಕಾರ


ಕರ್ನಾಟಕದಲ್ಲಿ ಕನ್ನಡಕ್ಕೆ ಆದ್ಯತೆ ಇರುತ್ತದೆ. ಬೇರೆ ಭಾಷೆ ಬಗ್ಗೆ ನಿರ್ಲಕ್ಷ್ಯ ಮಾಡುವುದಿಲ್ಲ. ಮರಾಠಾ ಪ್ರಾಧಿಕಾರ ಮರಾಠಾ ಸಮುದಾಯದ ಅಭಿವೃದ್ಧಿಗಾಗಿ ಮಾಡಲಾಗಿದೆ. ಅದನ್ನು ಅನ್ಯತಾ ಭಾವಿಸುವ ಅಗತ್ಯ ಇಲ್ಲ ಎಂದ ಅವರು, ಕನ್ನಡದ ಅಭಿಮಾನದ ಮೂಲಕವೇ ಕನ್ನಡ ಭಾಷೆ ಅಭಿವೃದ್ಧಿ ಮಾಡುತ್ತೇವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ