ಆ್ಯಪ್ನಗರ

ಬಾಕಿ ವೇತನ ಪಾವತಿಸಲು ಅತಿಥಿ ಶಿಕ್ಷಕರ ಮನವಿ

ಬೆಳಗಾವಿ: ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಮಂಗಳವಾರ ಖಾನಾಪುರ ತಾಲೂಕಿನ ...

Vijaya Karnataka 16 Oct 2019, 5:00 am
ಬೆಳಗಾವಿ: ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಮಂಗಳವಾರ ಖಾನಾಪುರ ತಾಲೂಕಿನ ಅತಿಥಿ ಶಿಕ್ಷಕರು ಜಿಪಂ ಸಿಇಒ ಡಾ.ಕೆ.ವಿ.ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿದರು.
Vijaya Karnataka Web 15 LBS 3_53


10 ತಿಂಗಳಿಂದ ಅತಿಥಿ ಶಿಕ್ಷಕರಿಗೆ ವೇತನ ನೀಡಿಲ್ಲ. ನಾವು ವೇತನ ನಂಬಿಕೊಂಡು ಜೀವನ ಸಾಗಿಸುತ್ತಿದ್ದೇವೆ. ಇಷ್ಟೊಂದು ವಿಳಂಬವಾಗಿ ವೇತನ ನೀಡುತ್ತಿರುವುದರಿಂದ ಸಮಸ್ಯೆಯಾಗುತ್ತಿದೆ. ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದೇವೆ. ಆದ್ದರಿಂದ ಕೂಡಲೇ 10 ತಿಂಗಳ ಬಾಕಿ ವೇತನ ನೀಡಬೇಕು. ಮುಂದೆ ಪ್ರತಿ ತಿಂಗಳು ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು.

ಸಮಸ್ಯೆ ಆಲಿಸಿದ ಜಿಪಂ ಸಿಇಒ ಡಾ. ಕೆ.ವಿ.ರಾಜೇಂದ್ರ ಖಾನಾಪುರ ಶಿಕ್ಷಣಾಧಿಕಾರಿಗೆ ಕರೆ ಮಾಡಿ, ಬರುವ ಶನಿವಾರದೊಳಗೆ ಬಾಕಿ ಉಳಿಸಿಕೊಂಡಿರುವ ಅತಿಥಿ ಶಿಕ್ಷಕರ ವೇತನವನ್ನು ಪಾವತಿಸಲು ಕ್ರಮಕೈಗೊಳ್ಳಬೇಕು. ಮುಂದೆ ಇಂತಹ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಅಶ್ವಿನಿ ಹಿರೇಮಠ, ಮನಿಷಾ ಪಾಟೀಲ. ಲಕ್ಷ್ಮೇ ಚಿಗರೆ, ಸರೋಜಿನಿ ಕಾಂಬಳೆ, ಶ್ವೇತಾ ಅಂಗಡಿ, ಗಂಗಾ ಮಾದರ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ