ಆ್ಯಪ್ನಗರ

ಅರ್ಧಕ್ಕೆ ನಿಂತ ಕಾಲೇಜು ಕಟ್ಟಡ; ಗ್ರಾಮಸ್ಥರ ಆಕ್ರೋಶ

ತೆಲಸಂಗ : ಗ್ರಾಮದ ಎಸ್‌ಎಂವೈಕೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ನಿರ್ಮಿಸಲಾಗುತ್ತಿರುವ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ವರ್ಷ ...

Vijaya Karnataka 10 May 2019, 5:00 am
ತೆಲಸಂಗ : ಗ್ರಾಮದ ಎಸ್‌ಎಂವೈಕೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ನಿರ್ಮಿಸಲಾಗುತ್ತಿರುವ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ವರ್ಷ ಸಮೀಪಿಸುತ್ತಿದೆ. ಆದರೆ ಅರ್ಧಕ್ಕೆ ನಿಂತ ಕಟ್ಟಡ ಪ್ರಾರಂಭಿಸದೆ ಶಿಥಿಲಗೊಳ್ಳುತ್ತಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Vijaya Karnataka Web BEL-9TELSANG1


10 ತಿಂಗಳ ಹಿಂದೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಅಥಣಿ ಶಾಸಕ ಮಹೇಶ ಕುಮಠಳ್ಳಿ ಕಟ್ಟಡದ ಭೂಮಿ ಪೂಜೆ ನೆರವೇರಿಸಿದ್ದರು. ಅಂದಿನಿಂದ ಇಂದಿನವರೆಗೂ 3 ಹಂತದ ಕಟ್ಟಡ ಸ್ಥಗಿತಗೊಂಡಿದೆ. ಇದರಿಂದ ಕಟ್ಟಡದ ಕಾಲಂಗೆ ಹಾಕಿದ ಕಬ್ಬಿಣ ತುಕ್ಕು ಹಿಡಿಯುತ್ತಿದೆ. ಕಡಿಮೆ ವೆಚ್ಚದಲ್ಲಿ ಪರಿಸರ ಸ್ನೇಹಿ ಸಾಮಗ್ರಿ ಉಪಯೋಗಿಸಿ ಉತ್ತಮ ಗುಣಮಟ್ಟದ ಕಟ್ಟಡ ನಿರ್ಮಿಸಬೇಕು. ಆದರೆ ಇದ್ಯಾವುದನ್ನೂ ಇಲ್ಲಿ ಪಾಲನೆ ಮಾಡಿಲ್ಲ. ಮಣ್ಣಿನ ಇಟ್ಟಿಗೆ ಉಪಯೋಗಿಸುವಂತಿಲ್ಲ. ಕಾರ್ಮಿಕ ಮುಖ್ಯ ಕಚೇರಿಯಿಂದ ತಾಂತ್ರಿಕ ಅನುಮೋದನೆ ಪಡೆಯಬೇಕು.

ಈ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆಂದು ಹೇಳಲಾಗುತ್ತಿದೆ. 50 ಲಕ್ಷ ವೆಚ್ಚದ 3 ಕಟ್ಟಡ ಮತ್ತು 75 ಲಕ್ಷ ವೆಚ್ಚದ 4 ಕಟ್ಟಡ ಒಟ್ಟು 1 ಕೋಟಿ 25ಲಕ್ಷ ರೂಗಳ ಕಟ್ಟಡಗಳು ಅರ್ಧಕ್ಕೆ ನಿಂತಿದ್ದರಿಂದ ಸಂಪೂರ್ಣ ಗುಣಮಟ್ಟ ಕಳೆದುಕೊಳ್ಳುತ್ತಿವೆ. ಅಲ್ಲದೆ ಸರಕಾರದ ನಿಯಮ ಗಾಳಿಗೆ ತೂರಿ ಮನಬಂದಂತೆ ನಿರ್ಮಿಸುತ್ತಿರುವ ಕಟ್ಟಡದ ನಿರ್ಮಾಣದ ಬಗ್ಗೆ ತನಿಖೆಯಾಗಬೇಕು. ಅಲ್ಲದೆ ಅರ್ಧಕ್ಕೆ ನಿಲ್ಲಿಸಿರುವ ಬಗ್ಗೆ ಕಾರ್ಮಿಕ ಮುಖ್ಯ ಕಚೇರಿಯಿಂದ ತಾಂತ್ರಿಕ ಅನುಮೋದನೆ ಪಡೆಯದಿರುವ ಬಗ್ಗೆ ತೆಲಸಂಗ ಗ್ರಾಮ ಪಂಚಾಯಿತಿ ಗ್ರಾಮ ಸಭೆಯಲ್ಲಿ ಮಾಹಿತಿ ನೀಡಬೇಕು. ನಿರ್ಮಿತಿ ಕೇಂದ್ರದ ನಿಯಮಾವಳಿಯಂತೆಯೇ ನಿರ್ಮಿಸಬೇಕು. ಇಲ್ಲವಾದರೆ ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯ ಕರವೆ ಅಧ್ಯಕ್ಷ ಬುರಾನ ಅರಟಾಳ, ಜನ ಜಾಗೃತಿ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಘದ ಅಧ್ಯಕ್ಷ ರಾಜಕುಮಾರ ಹೊನಕಾಂಬಳೆ ಹಾಗೂ ಸಂಘದ ಸದ್ಯರು ಎಚ್ಚರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ