ಆ್ಯಪ್ನಗರ

ಲಿಂಗನಮಠ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಅಮಾನತು

ಖಾನಾಪುರ: ಇತ್ತೀಚೆಗೆ ತಾಲೂಕಿನ ಲಿಂಗನಮಠ ...

Vijaya Karnataka 11 Dec 2019, 5:00 am
ಖಾನಾಪುರ: ಇತ್ತೀಚೆಗೆ ತಾಲೂಕಿನ ಲಿಂಗನಮಠ ಗ್ರಾಮದ ಕೆವಿಜಿ ಬ್ಯಾಂಕಿನಲ್ಲಿನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಅಧಿಕಾರಿಗಳಿಗೆ ಪ್ರಕರಣದ ತನಿಖೆಗೆ ಸಹಕಾರ ನೀಡಲಿಲ್ಲಎಂಬ ಕಾರಣಕ್ಕಾಗಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ ಭಂಡಾರಿ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.
Vijaya Karnataka Web headmistress of linganamatha high school suspended
ಲಿಂಗನಮಠ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಅಮಾನತು


10 ವರ್ಷಗಳಿಂದ ಲಿಂಗನಮಠ ಶಾಲೆಯಲ್ಲಿಮುಖ್ಯ ಶಿಕ್ಷಕಿ ಹುದ್ದೆಯಲ್ಲಿಸೇವೆಯಲ್ಲಿರುವ ಭಂಡಾರಿ ಅವರ ವಿರುದ್ಧ ಖಾನಾಪುರ ಸಿಪಿಐ ನಂದಗಡ ಪೊಲೀಸ್‌ ಠಾಣೆಯಲ್ಲಿದೂರು ಸಲ್ಲಿಸಿದ್ದು, ಅಲ್ಲದೆ, ಸ್ಥಳೀಯರಿಂದಲೂ ಇವರ ವಿರುದ್ಧ ಹಲವು ದೂರುಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿಇಲಾಖಾ ವಿಚಾರಣೆ ಕಾಯ್ದಿರಿಸಿ ಕರ್ತವ್ಯದಿಂದ ಅಮಾನತುಗೊಳಿಸಿರುವುದಾಗಿ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ ಡಿ. 5ರಂದು ಹೊರಡಿಸಿರುವ ಆದೇಶದಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ