ಆ್ಯಪ್ನಗರ

ಹೃದಯಾಘಾತ: ಕರ್ತವ್ಯನಿರತ ಮುಖ್ಯಪೇದೆ ಸಾವು

ರಾಮದುರ್ಗ: ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಕರ್ತವ್ಯ ನಿರತ ಹೆಡ್‌ ಕಾನ್‌ಸ್ಟೆಬಲ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ...

Vijaya Karnataka 3 May 2019, 5:00 am
ರಾಮದುರ್ಗ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಕರ್ತವ್ಯ ನಿರತ ಹೆಡ್‌ ಕಾನ್‌ಸ್ಟೆಬಲ್‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
Vijaya Karnataka Web BEL-02RD18


ಸ್ಥಳೀಯ ಡಿವೈಎಸ್‌ಪಿ ಕಚೇರಿಯಲ್ಲಿ ಮುಖ್ಯ ಪೇದೆಯಾಗಿ ಕಾರ್ಯನಿರ್ಹಹಿಸುತ್ತಿರುವ ಮಂಜುನಾಥ ಗುರಪ್ಪ ಕಮ್ಮಾರ(44) ಮೃತರು.

ಗುರುವಾರ ಬೆಳಗ್ಗೆ ಕಚೇರಿಗೆ ಆಗಮಿಸಿದ್ದ ಇವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷ ಣ ಅಲ್ಲಿರುವ ಸಿಬ್ಬಂದಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಗೆ ಕಳಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಮಂಜುನಾಥ ಕಮ್ಮಾರ ಸವದತ್ತಿ ತಾಲೂಕಿನ ಯಕ್ಕುಂಡಿ ಗ್ರಾಮದವರು. 1997ರಲ್ಲಿ ಪೊಲೀಸ್‌ ವೃತ್ತಿಗೆ ಸೇರಿದ್ದ ಇವರು 5 ವರ್ಷಗಳಿಂದ ರಾಮದುರ್ಗ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪದನ್ನೋತಿ ಹೊಂದಿ ಡಿವೈಎಸ್‌ಪಿ ಕಚೇರಿಯಲ್ಲಿ ಮುಖ್ಯ ಪೇದೆಯಾಗಿ ಮೂರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಮೃತರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ.

ಸ್ವಗ್ರಾಮ ಯಕ್ಕುಂಡಿಯಲ್ಲಿ ಸಂಜೆ ಸರಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಯಿತು. ಡಿವೈಎಸ್‌ಪಿ ಬಿ.ಎಸ್‌.ಪಾಟೀಲ, ಸಿಪಿಐ ಶ್ರೀನಿವಾಸ ಹಾಂಡ, ಸವದತ್ತಿ ಸಿಪಿಐ ಸರವಗೋಳ, ಪಿಎಸ್‌ಐ ರಾಮನಗೌಡ ಸಂಕನಾಳ ಸೇರಿದಂತೆ ಇತರ ಸಿಬ್ಬಂದಿ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ