ಆ್ಯಪ್ನಗರ

ಬೆಳಗಾವಿಯಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ: ಚತುರ್ಥಿ ಸಂಭ್ರಮದಲ್ಲಿರುವ ಜನರ ಆತಂಕ

ಕುಂದಾ ನಗರಿ ಬೆಳಗಾವಿಯಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರೆದಿದ್ದು, ಜನರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

Vijaya Karnataka Web 6 Sep 2019, 11:18 am
ಬೆಳಗಾವಿ: ಬೆಳಗಾವಿ ನಗರ, ಖಾನಾಪುರ ಸೇರಿದಂತೆ ಕೆಲವೆಡೆ ಮತ್ತೆ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಗಣೇಶ ಚತುರ್ಥಿ ಸಂಭ್ರಮದಲ್ಲಿರುವ ಜನರು ಆತಂಕಗೊಂಡಿದ್ದಾರೆ.
Vijaya Karnataka Web belagavi


ನಗರದಲ್ಲಿ ಗುರುವಾರ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಕೆಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಇತ್ತೀಚೆಗಷ್ಟೆ, ಭಾರೀ ಮಳೆಯಿಂದ ಬಳ್ಳಾರಿ ನಾಲೆ ತುಂಬಿ ಹರಿದ ಪರಿಣಾಮ ನಗರದ ಒಂದು ಭಾಗ ಸಂಪೂರ್ಣ ಜಲಾವೃತಗೊಂಡಿತ್ತು. ಈಗ ಪುನಃ ಮಳೆಯಾಗುತ್ತಿರುವ ಕಾರಣ ಸಾರ್ವಜನಿಕರು ಭಯಭೀತರಾಗಿದ್ದಾರೆ.

ಖಾನಾಪುರ ಘಟ್ಟ ಪ್ರದೇಶಗಳಲ್ಲೂ ಉತ್ತಮ ಮಳೆಯಾಗುತ್ತಿದ್ದು, ಮಲಪ್ರಭಾ ನದಿ ಹರಿವು ಹೆಚ್ಚುತ್ತಿದೆ. ಈಗಾಗಲೇ ಸವದತ್ತಿ ಬಳಿಯ ಮಲಪ್ರಭಾ ಜಲಾಶಯ‌ ಪೂರ್ಣ ತುಂಬಿರುವ ಸ್ಥಿತಿಯಲ್ಲಿದ್ದು, ಸದ್ಯಕ್ಕೆ ಇರುವ 7 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರಿನ ಹರಿವಿಗೆ ಪ್ರತಿಯಾಗಿ ಅಷ್ಟೇ ಪ್ರಮಾಣದ ನೀರು ಹೊರಬಿಡಲಾಗುತ್ತಿದೆ. 15 ಸಾವಿರ ಕ್ಯೂಸೆಕ್ ದಾಟಿದರೆ ಡ್ಯಾಂ ಕೆಳಗಿನ ಮುನವಳ್ಳಿ, ರಾಮದುರ್ಗ ಪಟ್ಟಣಗಳು ಸೇರಿ ನದಿ ದಡದ ಹಳ್ಳಿಗಳು ಮುಳುಗವ ಆತಂಕ ವ್ಯಕ್ತವಾಗುತ್ತಿದೆ.

ಈ ಮಧ್ಯೆ, ಮಹಾರಾಷ್ಟ್ರದಲ್ಲೂ ಮಳೆ ಹೆಚ್ಚುತ್ತಿರುವುದರಿಂದ ಅಲ್ಲಿನ ಜಲಾಶಯಗಳಿಂದ ಕೃಷ್ಣೆ ಮತ್ತು ಉಪನದಿಗಳಿಗೆ ಒಟ್ಟು 2 ಲಕ್ಷ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ಅಥಣಿ, ರಾಯಬಾಗ ತಾಲೂಕುಗಳ ನದಿ ತೀರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ