ಆ್ಯಪ್ನಗರ

ಮಹಾರಾಷ್ಟ್ರದಲ್ಲಿ ಮತ್ತೆ ಮಳೆ ಆರ್ಭಟ: ಕೃಷ್ಣಾ ತೀರದಲ್ಲಿ ಆತಂಕದ ಸ್ಥಿತಿ

ಬೆಳಗಾವಿ ಸೇರಿದಂತೆ ಮಾಹಾರಾಷ್ಟ್ರದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕೃಷ್ಣಾ ನದಿ ತೀರದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ.

Vijaya Karnataka Web 5 Sep 2019, 3:32 pm
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರದಲ್ಲಿ ಮತ್ತೆ ಎಡಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನದಿಗಳಲ್ಲಿ ನೀರಿನ ಹರಿವು ಹೆಚ್ಚುತ್ತಿದೆ. ಅದರಲ್ಲೂ ಮಹಾರಾಷ್ಟ್ರದಿಂದ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕೃಷ್ಣಾ ತೀರ ಪ್ರದೇಶದಲ್ಲಿ ಮತ್ತೆ ಆತಂಕದ ಪರಿಸ್ಥಿತಿ ಎದುರಾಗಿದೆ.
Vijaya Karnataka Web belagavi


ಈಗಷ್ಟೆ ನೆರೆಯಿಂದ ಪಾರಾಗಿ ಹೊಸ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿರುವ ಕುಟುಂಬಗಳಿಗೆ ಮಹಾ ನೀರು ಆತಂಕದ ಎಚ್ಚರಿಕೆ ನೀಡಿದೆ.

ಅಲ್ಲದೆ, ಜಿಲ್ಲೆಯ ಪ್ರಮುಖ ನದಿಗಳಾದ ಘಟಪ್ರಭಾ ಮತ್ತು ಮಲಪ್ರಭಾ ನದಿಗಳಲ್ಲೂ ಒಳ ಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಬಿಡಲಾಗುತ್ತಿದ್ದು, ನದಿ ತೀರದ ಗ್ರಾಮಗಳ ಜನರು ಮುನ್ನೇಚ್ಚರಿಕೆ ಕೈಗೊಳ್ಳುವಂತೆಯೂ ಜಿಲ್ಲಾಡಳಿತ ಸೂಚನೆ ರವಾನಿಸಿದೆ.

ಕಳೆದ ಎರಡು ದಿನಗಳಿಂದ 45 ಸಾವಿರ ಕ್ಯೂಸೆಕ್ ಪ್ರಮಾಣದ ನೀರು ಗುರುವಾರ 1.33ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು ಮುಂದಿನ ಎರಡು ದಿನಗಳಲ್ಲಿ ನೀರು ಜಿಲ್ಲೆ ಗಡಿ ಗ್ರಾಮಗಳನ್ನು ಮುಟ್ಟಲಿದೆ. ಅದೇ ರೀತಿ ಘಟಪ್ರಭಾ ನದಿಯಿಂದ 14 ಸಾವಿರ ಕ್ಯೂಸೆಕ್ ಮತ್ತು ಮಲಪ್ರಭಾ ನದಿಯಿಂದ 6000ಕ್ಯೂಸೆಕ್ ನೀರು ಹೊರ ಬಿಡುತ್ತಿರುವುದರಿಂದ ಜಲಾಶಯ ಕೆಳ ಹಂತದ ಜನರು ಮತ್ತೊಂದು ಬಾರಿ ಸುರಕ್ಷಿತ ಸ್ಥಳಗಳಿಗೆ ತೆರಳುವ ಅನಿವಾರ್ಯತೆ ಎದುರಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ