ಆ್ಯಪ್ನಗರ

ಖಾನಾಪುರ ಅರಣ್ಯ ಪ್ರದೇಶದಲ್ಲಿ ವರುಣನ ಆರ್ಭಟ

ಮಳೆಯಿಂದ 12 ಮನೆಗಳಿಗೆ ಹಾನಿ ಖಾನಾಪುರ: ತಾಲೂಕಿನ ಅರಣ್ಯ ಪ್ರದೇಶದಲ್ಲಿ ಮಂಗಳವಾರ ವರುಣನ ಆರ್ಭಟ ಮುಂದುವರಿದಿದ್ದು, ಮಂಗಳವಾರ ಸಂಜೆಯವರೆಗೆ ವಿವಿಧ ಗ್ರಾಮಗಳ ...

Vijaya Karnataka 11 Jul 2018, 5:00 am
ಖಾನಾಪುರ: ತಾಲೂಕಿನ ಅರಣ್ಯ ಪ್ರದೇಶದಲ್ಲಿ ಮಂಗಳವಾರ ವರುಣನ ಆರ್ಭಟ ಮುಂದುವರಿದಿದ್ದು, ಮಂಗಳವಾರ ಸಂಜೆಯವರೆಗೆ ವಿವಿಧ ಗ್ರಾಮಗಳ ಒಟ್ಟು 12 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಕಂದಾಯ ಇಲಾಖೆಯ ಮೂಲಗಳು ತಿಳಿಸಿವೆ.
Vijaya Karnataka Web BEL-10KHANAPUR3


ಭೀಮಗಡ, ಕಣಕುಂಬಿ, ಲೋಂಡಾ, ಜಾಂಬೋಟಿ, ನಾಗರಗಾಳಿ, ನೀಲಾವಡೆ ಮತ್ತು ಗುಂಜಿ ಕಾಡಿನಲ್ಲಿ ಉತ್ತಮ ಮಳೆ ಸುರಿದಿದೆ. ಚೋರ್ಲಾ ಘಟ್ಟ ಪ್ರದೇಶದ ಮಾನ, ಸಡಾ, ಚೋರ್ಲಾ, ಸೂರಲ್‌, ಪಾರವಾಡ, ಚಿಕಲೆ, ಕಣಕುಂಬಿ ಭಾಗದಲ್ಲಿ ಮಳೆಯ ಜೊತೆಗೆ ಮಂಜು ಮತ್ತು ಶೀತಲ ವಾತಾವರಣ ಮುಂದುವರಿದಿದೆ. ಹಬ್ಬನಹಟ್ಟಿಯ ಆಂಜನೇಯ ದೇವಾಲಯದ ಮುಕ್ಕಾಲು ಭಾಗ ಮಲಪ್ರಭಾ ನದಿಯಲ್ಲಿ ಮುಳುಗಡೆಯಾಗಿದೆ. ಸತತ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗಿದೆ. ಕಾನನದಂಚಿನ ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿದ್ದು, ಘಟ್ಟ ಪ್ರದೇಶದಲ್ಲಿ ದಟ್ಟವಾದ ಮಂಜು ಆವರಿಸಿ ಬೆಳಗಾವಿ-ಪಣಜಿ ಹೆದ್ದಾರಿಯಲ್ಲಿ ರಸ್ತೆ ಸಂಚಾರಕ್ಕೆ ಅಡೆತಡೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ