ಆ್ಯಪ್ನಗರ

ಮತದಾರರ ನೆರವಿಗೆ ಸಹಾಯವಾಣಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಧ್ವನಿ ಮುದ್ರಿತ ಸಹಾಯವಾಣಿ ಕೇಂದ್ರ ಕಾರ್ಯನಿರ್ವಹಿಸುತ್ತಿದೆ...

Vijaya Karnataka 29 Jan 2019, 5:00 am
ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಧ್ವನಿ ಮುದ್ರಿತ ಸಹಾಯವಾಣಿ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಮತದಾರರ ಪಟ್ಟಿ ವಿಷಯವಾಗಿ ಸಾರ್ವಜನಿಕರು ಕರೆ ಮಾಡಬಹುದು. ಕರೆಗಳಿಗೆ ಉತ್ತರಿಸಲು ತರಬೇತಿ ಪಡೆದ ನಾಲ್ವರು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಒಂದು ತಿಂಗಳಿನಿಂದಲೇ ಕಾರ್ಯನಿರ್ವಹಿಸುತ್ತಿದ್ದ ಸಹಾಯವಾಣಿ ಕೇಂದ್ರದಲ್ಲಿ ಈಗ ನಾಲ್ಕು ಕಂಪ್ಯೂಟರ್‌ ಅಳವಡಿಕೆ ಮಾಡಲಾಗಿದ್ದು, ಸಾರ್ವಜನಿಕರು ಮಾಡುವ ಎಲ್ಲ ಕರೆಗಳನ್ನು ಆನ್‌ಲೈನ್‌ ಮೂಲಕ ಧ್ವನಿ ಮುದ್ರಿಸಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಕೆ, ಹೆಸರು ಮಾರ್ಪಾಡು, ವರ್ಗಾವಣೆ ಸೇರಿದಂತೆ ಮತದಾರರ ಪಟ್ಟಿವಿಷಯವಾಗಿ ಸಾರ್ವಜನಿಕರು ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು. ಜಿಲ್ಲೆ ವ್ಯಾಪ್ತಿಯಲ್ಲಿ ಮಾತ್ರ ಕಾರ್ಯನಿರ್ವಹಿಸುವ ಉಚಿತ ಕರೆ ಮಾಡುವ 1950 ನಂಬರ್‌ ನೀಡಲಾಗಿದೆ. ಹೊರ ಜಿಲ್ಲೆಗಳಿಂದ 0831-1950ಗೆ ಕರೆ ಮಾಡಬಹುದು ಎಂದು ಜಿಲ್ಲಾ ಚುನಾವಣಾ ಕಚೇರಿ ತಿಳಿಸಿದೆ.
Vijaya Karnataka Web helpline for voters regarding parliamentary election
ಮತದಾರರ ನೆರವಿಗೆ ಸಹಾಯವಾಣಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ