ಆ್ಯಪ್ನಗರ

ಖಂಜರ್‌ ಗಲ್ಲಿಯಲ್ಲಿ ಹೈ ಅಲರ್ಟ್‌

ಬೆಳಗಾವಿ: ಖಂಜರ್‌ ಗಲ್ಲಿಯಲ್ಲಿ ಸೋಮವಾರ ರಾತ್ರಿ ನಡೆದ ...

Vijaya Karnataka 28 Nov 2018, 5:00 am
ಬೆಳಗಾವಿ : ಖಂಜರ್‌ ಗಲ್ಲಿಯಲ್ಲಿ ಸೋಮವಾರ ರಾತ್ರಿ ನಡೆದ ಕಲ್ಲು ತೂರಾಟದಿಂದ ನಿರ್ಮಾಣಗೊಂಡಿದ್ದ ಪ್ರಕ್ಷುಬ್ಧ ವಾತಾವರಣ ನಿವಾರಣೆ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್‌ ಬಂದೋಬಸ್ತ್‌ ಇನ್ನಷ್ಟು ಹೆಚ್ಚಿಸಲಾಗಿದೆ.
Vijaya Karnataka Web BLG-2711-2-52-27MAHESH6


ನಗರ ಪೊಲೀಸ್‌ ಆಯುಕ್ತ ಡಾ.ಡಿ.ಸಿ. ರಾಜಪ್ಪ ಕಲ್ಲು ತೂರಾಟ ನಡೆದ ಸ್ಥಳ ಸೇರಿದಂತೆ ಸೂಕ್ಷ್ಮ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದ್ದು, ಮುಂಜಾಗ್ರತೆ ಕ್ರಮವಾಗಿ ಎಲ್ಲ ಸೂಕ್ಷ್ಮಪ್ರದೇಶಗಳಲ್ಲಿ ಪೊಲೀಸ್‌ ಸಿಬ್ಬಂದಿ ಬಲ ಹೆಚ್ಚಿಸಲು ಸೂಚಿಸಿದ್ದಾರೆ. ಕಳೆದೊಂದು ವಾರದಲ್ಲಿ ಎರಡು ಬಾರಿ ಕಲ್ಲು ತೂರಾಟ ನಡೆದಿದ್ದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು.

ಕಳೆದ ವರ್ಷ ಅಧಿವೇಶನ ಸಂದರ್ಭದಲ್ಲೇ ನಡೆದ ಕಲ್ಲು ತೂರಾಟ ಪೊಲೀಸರ ಕರ್ತವ್ಯ ದಕ್ಷತೆ ಪ್ರಶ್ನಿಸುವಂತೆ ಮಾಡಿತ್ತು. ಈಗ ಮತ್ತೆ ಅಧಿವೇಶನಕ್ಕೆ ದಿನಗಣನೆಗೆ ಆರಂಭಗೊಂಡಿರುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟೆಚ್ಚರಿಕೆ ವಹಿಸುವಂತೆ ಆಯುಕ್ತರು ಆದೇಶಿಸಿದ್ದಾರೆ. ನಗರದ ಶಾಂತಿಗೆ ಭಂಗ ತರುವ ನಿಟ್ಟಿನಲ್ಲಿ ವರ್ತಿಸುತ್ತಿರುವ ಕಿಡಿಗೇಡಿಗಳ ಬಂಧನಕ್ಕೆ ವಿಶೇಷ ಅಧಿಕಾರಿಗಳ ತಂಡ ರಚಿಸಿದ್ದಾರೆ.

ನಗರದಲ್ಲಿ ನಡೆಯುತ್ತಿರುವ ಅಹಿತಕರ ಘಟನೆಗಳಿಗೆ ಕಾನೂನುಬಾಹಿರ ಚಟುವಟಿಕೆಗಳೇ ಕಾರಣ ಎಂದು ಸ್ಥಳೀಯರು ಮಂಗಳವಾರವೂ ಆರೋಪಿಸಿದ್ದಾರೆ. ಕತ್ತಲಾಗುತ್ತಿದ್ದಂತೆ ಯುವಕರ ಗುಂಪು ಸಾರ್ವಜನಿಕರ ನೆಮ್ಮದಿ ಹಾಳು ಮಾಡುವ ರೀತಿಯಲ್ಲಿ ಬೈಕ್‌ ಚಲಾಯಿಸುತ್ತಿದೆ. ಕಂಡಕಂಡಲ್ಲಿ ಗಾಜಿನ ಬಾಟಲಿ ಎಸೆದು ಆತಂಕ ಸೃಷ್ಟಿಸುತ್ತಿದೆ. ಅಂಥ ಚಟುವಟಿಕೆಗಳ ಮೇಲೆ ಪೊಲೀಸರು ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಗಾಳಿ ಸುದ್ದಿಗೆ ಕಿವಿಗೊಡಬೇಡಿ :
''ನಗರದಲ್ಲಿ ಅಶಾಂತಿ ಸೃಷ್ಟಿಸಲು ಕೆಲವರು ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ. ಅಂಥ ಸುದ್ದಿಗಳನ್ನು ಪರಾಮರ್ಶಿಸದೆ ಸಾರ್ವಜನಿಕರು ನಂಬಬಾರದು. ಕಾನೂನು ಉಲ್ಲಂಘಿಸುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ'', ಎಂದು ಕಮಿಷನರ್‌ ಡಿ.ಸಿ.ರಾಜಪ್ಪ ತಿಳಿಸಿದ್ದಾರೆ. ''ಖಂಜರ್‌ ಗÜಲ್ಲಿ, ಘೀ ಗಲ್ಲಿ, ಖಡಕ್‌ ಗಲ್ಲಿ, ಶೆಟ್ಟಿ ಗಲ್ಲಿ, ಬಡಕಲ್‌ ಗಲ್ಲಿ ಸೇರಿದಂತೆ 20ಕ್ಕೂ ಹೆಚ್ಚು ಸೂಕ್ಷ್ಮಪ್ರದೇಶ ಗುರುತಿಸಿ ವಿಶೇಷ ಸಿಬ್ಬಂದಿ ನಿಯೋಜಿಸಲಾಗಿದೆ. ನಂಬರ್‌ ಪ್ಲೇಟ್‌ಗಳಿಲ್ಲದೆ ಓಡಾಡುತ್ತಿರುವ ವಾಹನಗಳನ್ನು ಜಪ್ತಿ ಮಾಡಲಾಗುತ್ತಿದೆ. ಖಾಲಿ ನಿವೇಶನಗಳಲ್ಲಿ ಗಾಂಜಾ ಸೇವಿಸುತ್ತಿರುವ ಕುರಿತು ದಾಖಲಾದ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಾಚರಣೆ ನಡೆಸಲಾಗುವುದು'', ಎಂದು ಅವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ