ಆ್ಯಪ್ನಗರ

ಚರಂಡಿ ನಿರ್ಮಾಣಕ್ಕೆ ಒತ್ತಾಯಿಸಿ ಹೆದ್ದಾರಿ ಬಂದ್‌

ದೊಡವಾಡ: ಚರಂಡಿ ನಿರ್ಮಾಣಕ್ಕೆ ಒತ್ತಾಯಿಸಿ ಸಮೀಪದ ಕರಿಕಟ್ಟಿ ಗ್ರಾಮಸ್ಥರು ಸೋಮವಾರ ಸವದತ್ತಿ-ಬೈಲಹೊಂಗಲ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟಿಸಿದರು...

Vijaya Karnataka 5 Jun 2018, 5:00 am
ದೊಡವಾಡ: ಚರಂಡಿ ನಿರ್ಮಾಣಕ್ಕೆ ಒತ್ತಾಯಿಸಿ ಸಮೀಪದ ಕರಿಕಟ್ಟಿ ಗ್ರಾಮಸ್ಥರು ಸೋಮವಾರ ಸವದತ್ತಿ-ಬೈಲಹೊಂಗಲ ಹೆದ್ದಾರಿ ಬಂದ್‌ ಮಾಡಿ ಪ್ರತಿಭಟಿಸಿದರು.
Vijaya Karnataka Web BEL-4DWDP3


ಇದೇ ವೇಳೆ ಪ್ರತಿಭಟನಾಕಾರರು ಮಾತನಾಡಿ, ಗ್ರಾಮದಲ್ಲಿ ಚರಂಡಿಗಳು ಇಲ್ಲದ ಕಾರಣ ಇತ್ತೀಚೆಗೆ ಸುರಿದ ಭಾರಿ ಮಳೆ ನೀರು ಸರಾಗವಾಗಿ ಹರಿಯದೆ ಮನೆಗಳಿಗೆ ನುಗ್ಗಿ ಅಪಾರ ಹಾನಿಯಾಗಿದೆ. ಚರಂಡಿ ನಿರ್ಮಿಸುವಂತೆ ಹೆದ್ದಾರಿ ಕಾಮಗಾರಿ ಕೈಗೊಂಡು ಅಶೋಕ ಕಂಪನಿಯವರಿಗೆ ಹಲವು ಬಾರಿ ಒತ್ತಾಯಿಸಿದರೆ, ಅದು ನಮಗೆ ಸಂಬಂಧಿಸಿದ್ದಲ್ಲ. ಕೆಆರ್‌ಡಿಸಿಎಲ್‌ ನವರನ್ನು ಭೇಟಿಯಾಗಿ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಸ್ಥರಾದ ಪ್ರಕಾಶ ಕಪಲಿ ಸೇರಿದಂತೆ ಇನ್ನಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ