ಆ್ಯಪ್ನಗರ

ಚನ್ನಮ್ಮ ವಿವಿಗೆ ಹಿರೇಬಾಗೇವಾಡಿ ಸೂಕ್ತ ಸ್ಥಳ: ಮಲ್ಲಪ್ಪನ ಗುಡ್ಡದ ಜಾಗ ಪರಿಶೀಲಿಸಿದ ಸುರೇಶ ಅಂಗಡಿ

ಗ್ರಾಮದ ಮಲ್ಲಪ್ಪನ ಗುಡ್ಡದ ಪ್ರದೇಶ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸ್ಥಾಪನೆಗೆ ಸೂಕ್ತವಾಗಿದೆ. ಈ ಪ್ರದೇಶ ಬೆಳಗಾವಿ ನಗರಕ್ಕೆ ಸಮೀಪವಿದ್ದು, ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

Vijaya Karnataka Web 1 Jun 2020, 12:50 pm
ಹಿರೇಬಾಗೇವಾಡಿ: ಹಿರೇಬಾಗೇವಾಡಿ ಗ್ರಾಮದ ಮಲ್ಲಪ್ಪನ ಗುಡ್ಡ ಪ್ರದೇಶ ಚನ್ನಮ್ಮ ವಿವಿಗೆ ಸೂಕ್ತ ಸ್ಥಳವಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ. ಜಾಗ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಈ ಪ್ರದೇಶ ಬೇರೆ ಜಿಲ್ಲೆಗಳಿಂದ ಉನ್ನತ ವ್ಯಾಸಂಗಕ್ಕಾಗಿ ಆಗಮಿಸುವ ಎಲ್ಲ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ವಿವಿಯ ಸರ್ವಾಂಗೀಣ ಅಭಿವೃದ್ಧಿಗೆ ಸೂಕ್ತ ಪ್ರದೇಶವಾಗಿದೆ. ಶೀಘ್ರವೇ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ವಿವಿಯ ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಇಲ್ಲಿ ರೈಲು ನಿಲುಗಡೆಗೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
Vijaya Karnataka Web ಸುರೇಶ್‌ ಅಂಗಡಿ


ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಎಂ.ರಾಮಚಂದ್ರಗೌಡ ಮಾತನಾಡಿ, ಕೇಂದ್ರದ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಭೂತರಾಮನಹಟ್ಟಿ ಗ್ರಾಮದಲ್ಲಿ ವಿವಿಯ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮತಿ ಸಿಗುತ್ತಿಲ್ಲ. ಇದರಿಂದಾಗಿ ವಿವಿಯ ಅಭಿವೃದ್ಧಿಗೆ ಅಡ್ಡಿಯಾಗುತ್ತಿದೆ. ಹಾಗಾಗಿ ಹಿರೇಬಾಗೇವಾಡಿಯ ಮಲ್ಲಪ್ಪನ ಗುಡ್ಡ ಪ್ರದೇಶ ವಿವಿ ಸ್ಥಾಪನೆಗೆ ಸೂಕ್ತವಾಗಿದೆ ಎಂದರು.

ವಿವಿಯ ಕುಲಸಚಿವ ಬಸವರಾಜ ಪದ್ಮಶಾಲಿ, ಎಂ.ಜಯಪ್ಪ, ಡಿ.ಎನ್‌.ಪಾಟೀಲ, ಹೋರಾಟ ಸಮಿತಿ ಸಂಚಾಲಕ ಮಂಜುನಾಥ ವಸ್ತ್ರದ, ಸಿದ್ದಾರೂಢ ಹೊನ್ನನ್ನವರ, ವಕೀಲ ಆರ್‌.ಎನ್‌. ಪಾಟೀಲ, ವೈಜನಾಥ ಪಾಟೀಲ, ಎನ್‌.ಎಸ್‌. ಪಾಟೀಲ, ಯಲ್ಲಪ್ಪ ಧರೆಣ್ಣವರ, ರಾಜು ರೊಟ್ಟಿ, ಬಾಪು ನಾವಲಗಟ್ಟಿ, ಶ್ರೀಶೈಲ ಪಡಗಲ್‌, ರಾಜು ಹಂಚಿನಮನಿ ಮೊದಲಾದವರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ