ಆ್ಯಪ್ನಗರ

ಮನೆಗಳ್ಳತನ ಆರೋಪಿ ಬಂಧನ

ಬೆಳಗಾವಿ: ಮನೆಗಳ್ಳತನ ಮಾಡುತ್ತಿದ್ದ ಆರೋಪದಡಿ ...

Vijaya Karnataka 30 Nov 2019, 5:00 am
ಬೆಳಗಾವಿ: ಮನೆಗಳ್ಳತನ ಮಾಡುತ್ತಿದ್ದ ಆರೋಪದಡಿ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ, ಆತನಿಂದ 2.40 ಲಕ್ಷ ರೂ. ಮೌಲ್ಯ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
Vijaya Karnataka Web 29LBS8_53
ಮನೆಗಳ್ಳತನ ಆರೋಪದಡಿ ಪೊಲೀಸರು ಬಂಧಿಸಿರುವ ಅಬ್ದುಲ್‌ ರಶೀದ್‌ ವಿಲಿಯಂ.


ಗೋವಾದ ಅಬ್ದುಲ್‌ ರಶೀದ್‌ ವಿಲಿಯಂ ಬಂಧಿತ. ಇನ್ನೊಬ್ಬ ಆರೋಪಿ ಭಾಗ್ಯನಗರದ ಸಂದೀಪ ವಿಠ್ಠಲ ಚೌಗುಲೆ ತಲೆಮರೆಸಿಕೊಂಡಿದ್ದಾನೆ. ಬೆಳಗಾವಿಯ ಸದಾಶಿವ ನಗರದಲ್ಲಿನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್‌ ರಶೀದ್‌ ವಿಲಿಯಂನನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿರುವುದು ತಿಳಿದು ಬಂದಿದೆ. ಸಂದೀಪ ಚೌಗುಲೆ ಎಂಬಾತನ ಬಳಿ ಕಳ್ಳತನ ಮಾಡಿದ್ದ 2.40 ಲಕ್ಷ ರೂ. ಮೌಲ್ಯದ ಆಭರಣ ನೀಡಿರುವುದಾಗಿ ಆರೋಪಿ ವಿಚಾರಣೆ ವೇಳೆ ತಿಳಿಸಿದ್ದಾನೆ. ತಲೆಮರೆಸಿಕೊಂಡಿರುವ ಸಂದೀಪ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈ ಕುರಿತು ಎಪಿಂಎಸಿ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ